ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದ ಸಹಕಾರ ಮುಖ್ಯ: ಶಾಸಕರು

ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದ ಸಹಕಾರ ಮುಖ್ಯ: ಶಾಸಕರು Government cooperation important for rural development: MLAs

ಲೋಕದರ್ಶನ ವರದಿ 

ಯರಗಟ್ಟಿ  19: ಶ್ರೀ ರಾಮನ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಆಲದಕಟ್ಟಿ ಕೆ.ಎಂ ಗ್ರಾಮದ ಶ್ರೀ ರಾಮ ಮಂದಿರಕ್ಕೆ ಈಚಗೆ ಬೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸನ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಜನರ ಬೇಡಿಕೆಗಳಿಗೆ ಸ್ಪಂದಿಸಿ ಅವರಿಗೆ ಅವಶ್ಯವಾಗಿರುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವ ಮುಖಾಂತರ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನ.ೆ ದೇವಸ್ಥಾನ ಜಿರ್ಣೋದ್ಧಾರಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.    

 ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ ಮಾತನಾಡಿ, ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ವಿಸ್ವಾಸ ವ್ಯದ್ಯ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಗ್ರಾಮಸ್ಥರ ಸಹಕಾರ ಬಹಳ ಮುಖ್ಯ ಎಂದರು.  ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಗ್ರಾಪಂ ಮಾಜಿ ಸದಸ್ಯ ಅಶೋಕ ಚಿಕ್ಕೊಪ್ಪ, ಪಿಕೆಪಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಹೊನ್ಯಾಳ, ಮುಖಂಡ ಬಾಬನಾಯ್ಕ ದಾಗನಾಯ್ಕರ, ಸನ್ನಗೌಡ ಸನ್ನಗೌಡ್ರ, ಶಿವನಾಯ್ಕ ಸತ್ಯನಾಯ್ಕರ, ಬಸವರಾಜ ಕುರಗುಂದ, ಪರಸು ಪುಜೇರ, ವಿಠ್ಠಲ ಹಲಗಲಿ, ಪ್ರಕಾಶ ತಳವಾರ, ಮುದಕಪ್ಪ ಚೌಡಪ್ಪನವರ, ಯಲ್ಲನಾಯ್ಕ ಸತ್ಯನಾಯ್ಕರ, ಅಜ್ಜಪ್ಪ ದಾಗನಾಯ್ಕರ ಮತ್ತಿತರಿದ್ದರು.