ಸರ್ಕಾರಿ ವೈದ್ಯ ಮಹೇಶ ಮಡಿವಾಳರ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿ
Government doctor Mahesh Madiwala succeeds in UPSC exam
ತಾಳಿಕೋಟಿ 23: ಪಟ್ಟಣದ ಸಮೀಪದ ಮಡಿಕೇಶ್ವರ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ವಿಜಯಪುರ ಜಿಲ್ಲೆ, ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದವರಾದ ಮಹೇಶ ಮಡಿವಾಳರ ಇವರು 2024- 25 ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 482 ರಾಂಕ್ ಪಡೆದು ಅಭೂತೂಪರ್ವಾಗಿ ಯಶಸ್ಸನ್ನು ಸಾಧಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಪರೀಕ್ಷೆಯಲ್ಲಿ ಯಶಸ್ವಿಯಾಗಬೇಕೆಂಬುದು ನನ್ನ ಬಹುದಿನದ ಕನಸಾಗಿತ್ತು, ನಿರಂತರ ಪರಿಶ್ರಮದ ಫಲವಾಗಿ ಇಂದು ನನಗೆ ಆ ಯಶಸ್ಸು ಸಿಕ್ಕಿದೆ ಈ ಸಂದರ್ಭದಲ್ಲಿ ನನಗೆ ಅತೀವ ಸಂತೋಷವಾಗಿದೆ ಎಂದರು.
ಪೀರಾಪೂರ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆರಿ್ಬ. ದಮ್ಮೂರಮಠ ಮಾತನಾಡಿ ಮಹೇಶ ಮಡಿವಾಳರ ಅವರು ತಮ್ಮ ವೃತ್ತಿ ಜೀವನದ ಆಚೆ ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ದೇಶದ ಅತಿ ಮುಖ್ಯ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿರುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ. ಅವರಿಗೆ ನಾವು ಅಭಿನಂದಿಸುತ್ತೇವೆ ಎಂದರು.
ಈ ಸಮಯದಲ್ಲಿ ಅವರ ಆಪ್ತ ಬಳಗದ ವರಾದ ಮುತ್ತು ದೇಸಾಯಿ,ಸಂಗಮೇಶ ದೇಸಾಯಿ, ಟಿ.ಎಚ್. ಸುರಪೂರ, ಟಿ.ಸಿ. ಸಜ್ಜನ್, ವಿ.ಎನ್.ಯಾದಗಿರಿ, ಜಿ.ಪಿ.ಧನ ಪಾಲ ಹಾಗೂ ಮಲ್ಲು ಮಡಿವಾಳರ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 