ಸರ್ಕಾರಿ ನೌಕರರು ವೇತನದಲ್ಲಿ ವಂತಿಗೆ ನೀಡಿ : ಸಂಘದ ಅಧ್ಯಕ್ಷ ಬಿ.ಎ.ಕುಂಬಾರ
Government employees should contribute in their salaries: Association President B.A. Kumbara
ಲೋಕದರ್ಶನ ವರದಿ
ಸರ್ಕಾರಿ ನೌಕರರು ವೇತನದಲ್ಲಿ ವಂತಿಗೆ ನೀಡಿ : ಸಂಘದ ಅಧ್ಯಕ್ಷ ಬಿ.ಎ.ಕುಂಬಾರ
ಚಿಕ್ಕೋಡಿ 06: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅ.1ರಿಂದ ಜಾರಿಗೊಳಿಸಿದ್ದು, ನೌಕರರು ತಮ್ಮ ತಮ್ಮ ವಂತಿಗೆಯನ್ನು ವೇತನದಲ್ಲಿ ನೀಡಬೇಕೆಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಎ.ಕುಂಬಾರ ತಿಳಿಸಿದ್ದಾರೆ.
ಪತಿ- ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಗೆ ನೀಡುವುದು. ರಾಜ್ಯ ಸರ್ಕಾರದ ಅಧಿಕಾರಿ, ನೌಕರರ ತಂದೆ- ತಾಯಿ ಪಿಂಚಣಿದಾರರಾ ಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿ ?17 ಸಾವಿರ ದಿಂದ ?27 ಸಾವಿರಗಳಿಗೆ ಹೆಚ್ಚಳ ಮಾಡಿದೆ ಎಂದರು. ವಿವಾಹಿತ ಮಹಿಳಾ ನೌಕರರ ತಂದೆ- ತಾಯಿಯೂ ಸಹ ಈ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಮಾಸಿಕ ವಂತಿಕೆ ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತ ವಾಗಿ 18-10-2025 ರೊಳಗೆ ಸಂಬಂಧಿಸಿದ ಡಿಡಿಒ ಗಳಿಗೆ ನೀಡುವುದು.
ಈ ಯೋಜನೆಯ ಸೌಲಭ್ಯ ಪಡೆ ಯಲು ರಾಜ್ಯ ಸರ್ಕಾರದಈ ಯೋಜನೆಯ ಸೌಲಭ್ಯ ಪಡೆ ಯಲು ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ಧಿಷ್ಟಪ ಡಿಸಿರುವ ವಂತಿಕೆಯನ್ನು ಅಕ್ಟೋರ್ಬ-2025ನೇ ಮಾಹೆಯಿಂದ ನೀಡುವುದು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯ ರು ಈ ಯೋಜನ ಲಾಭಪಡೆಯಲಿದ್ದಾರೆ ಎಂದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 