ಸರ್ಕಾರ ನಿಷ್ಕ್ರಿಯ: ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
KPCC
ಬೆಂಗಳೂರು, ನ. 28-ರಾಜ್ಯದ ಅಭಿವೃದ್ಧಿ ಕೆಲಸಗಳನ್ನೆಲ್ಲ ನಿರ್ಲಕ್ಷಿಸಿ, ಜನತೆಯ ಸಮಸ್ಯೆಗಳಿಗೆ ಸ್ಪಂದಿಸದೇ ಸರ್ಕಾರಕ್ಕೆ ಸರ್ಕಾರವೇ ಉಪಚುನಾವಣೆಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕೆಪಿಸಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ರಾಜ್ಯಪಾಲ ವಜೂಭಾಯಿ ವಾಲಾ ಅವರ ಅನಾರೋಗ್ಯ ಕಾರಣದಿಂದಾಗಿ ಅವರ ನೇರ ಭೇಟಿ ಸಾಧ್ಯವಾಗದೇ ಇರುವುದರಿಂದ ಟಪಾಲು ಮೂಲಕ ಮೇಲ್ಮನೆ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ದೂರು ಸಲ್ಲಿಸಿತು.
ಸರ್ಕಾರದ ಸಚಿವರಿಂದ ನೀತಿ ಸಂಹಿತೆ ಉಲ್ಲಂಘನೆಯಾದರೂ ಆಯೋಗ ಕಣ್ಮುಚ್ಚಿ ಕುಳಿತಿದೆ. ಇಡೀ ಮಂತ್ರಿಮಂಡಲವೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಸರ್ಕಾರದ ಆಡಳಿತ ಯಂತ್ರ ಸ್ಥಗಿತಗೊಂಡಿದೆ. ಮುಖ್ಯಮಂತ್ರಿಗಳಾದಿಯಾಗಿ ಎಲ್ಲಾ ಸಚಿವರು ಉಪಚುನಾವಣೆಯಲ್ಲಿ ಭಾಗಿಯಾಗಿದ್ದರಿಂದ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಖಾಲಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 