ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಮಾ.30,ಕೊರೊನಾ ವೈರಸ್ ರೋಗ ತಡೆಗೆ ಗ್ರಾಮಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸ್ವಯಂಸೇವಕರು, ಸಂಘಸಂಸ್ಥೆಗಳು, ಅಧಿಕಾರಿಗಳ ಸಮಿತಿ ರಚನೆಯಾಗಬೇಕು. ಇದೇ ರೀತಿ ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕರ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಿ, ನಂತರ ಮಾರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರ ರೈತರ ಉತ್ಪನ್ನ ಖರೀದಿಗೆ ಶೀಘ್ರವೇ ವ್ಯವಸ್ಥೆ ಮಾಡುವ ಅನಿವಾರ್ಯತೆ ಎದುರಾಗಿದೆ. ಇಲ್ಲದೇ ಹೋದರೆ ಕೃಷಿ ವಲಯ ತೊಂದರೆಗೀಡಾಗುತ್ತದೆ. ಅದರ ಪರಿಣಾಮಗಳು ಭೀಕರ. ಇದು ಕುಟುಂಬಗಳನ್ನು ಆಪೋಷನ ತೆಗೆದುಕೊಳ್ಳುವ ಜೊತೆಗೆ, ಆರ್ಥಿಕತೆಗೆ ತೀವ್ರ ಪೆಟ್ಟು ನೀಡುತ್ತದೆ. ಅದನ್ನು ನೆನೆದು ನನಗಂತೂ ಆತಂಕವಾಗಿದೆ ಎಂದು ತಿಳಿಸಿದ್ದಾರೆ.
ಹಲವು ರೈತರು, ಕೃಷಿ ಉತ್ಪನ್ನ ಮಾರಾಟಗಾರರು ಈಗಾಗಲೆ ತಮ್ಮ ಪರಿಧಿಯಲ್ಲೇ ಸಾಗಾಟ, ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ಉತ್ಪನ್ನ ಸಾಗಿಸುವಾಗ ತಡೆಯುವ, ಅವರಿಂದ ದುಡ್ಡು ಕೇಳುತ್ತಿರುವ ಕುರಿತು ನನಗೆ ಮಾಹಿತಿ ಇದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರ್ಕಾರ ನಿರ್ಬಂಧ ಹೇರಬಾರದು. ಇದು ರೈತರ ಬದುಕಿನ, ಜನರ ಆಹಾರದ ಪ್ರಶ್ನೆಯಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ರೈತರಿಂದ ನೇರವಾಗಿ ಖರೀದಿಸಿದ ಉತ್ಪನ್ನಗಳನ್ನು, ನಗರ ವಾರ್ಡ್ ಮಟ್ಟದಲ್ಲಿ ವಿತರಣೆ ಮಾಡಲು ವ್ಯವಸ್ಥೆ ಮಾಡಬೇಕು. ಮಾಲ್ ಗಳನ್ನೂ ಮೀರಿ ಸಾರ್ವಜನಿಕ ಅಗತ್ಯಗಳನ್ನು ಪೂರೈಸುತ್ತಿರುವುದು ಸಣ್ಣ ಪುಟ್ಟ ಅಂಗಡಿಗಳು.ರೈತರ ಉತ್ಪನ್ನಗಳನ್ನು ನೇರವಾಗಿ ಇಂತಹ ಅಂಗಡಿಗಳಿಗೆ ತಲುಪಿಸಲು ವ್ಯವಸ್ಥೆಯೊಂದನ್ನು ಸರ್ಕಾರ ಕೂಡಲೇ ಸೃಷ್ಟಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 