92ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ
Government medical college protest enters 92nd day
ವಿಜಯಪುರ, 17 : 92 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಯಲ್ಲಿ ಕೊರೆಯುವ ಚಳಿ ಮಧ್ಯೆ ವೃದ್ಧರು, ಮಹಿಳೆಯರು-ಮಕ್ಕಳಿಂದ ಅಹೋರಾತ್ರಿ ಹೋರಾಟ ವಿಜಯಪುರ ನಗರದಲ್ಲಿ ಸರ್ಕಾರದ ಉದ್ದೇಶಿತ ವಿಜಯಪುರ ಜಿಲ್ಲಾ ಆಸ್ಪತ್ರೆ ಖಾಸಗಿಕರಣ ವಿರೋಧಿಸಿ ಪೂರ್ಣ ಪ್ರಮಾಣದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಇಂದಿಗೆ 90ನೇ ದಿನ ಪೂರೈಸಿದೆ. ಸರಕಾರ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆ ಧರಣಿ ನಿರತರು ಹೋರಾಟ ತೀವ್ರಗೊಳಿಸಿದ್ದಾರೆ.
ಎರಡು ದಿನದಿಂದ ಅಹೋರಾತ್ರಿ ಧರಣಿ ನಡೆಯುತ್ತಿದೆ. ನಗರದ ಅಂಬೇಡ್ಕರ್ ವೃತ್ತದ ಅರಾಕಿಲ್ಲಾ (ಹಂದಿ) ಗಾರ್ಡನ್ ಕಂದಕದ ನೀರಿಗೆ ಹೊಂದಿಕೊಂಡಂತೆ ಹಾಕಿರುವ ಪೆಂಡಾಲ್ ದಲ್ಲಿ ಕೊರೆಯುವ ಚಳಿಯ ಮಧ್ಯ ಹೋರಾಟ ನಡೆಯುತ್ತಿದೆ.
ಹೋರಾಟದಲ್ಲಿ ವಯೋವೃದ್ಧ ಹಿರಿಯರು, ಮಹಿಳೆಯರು, ವಿಶೇಷ ಚೇತನರು ಚಿಕ್ಕ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಹೋರಾಟ ಮುಂದುವರೆದಿದೆ.ಸರಕಾರ ಸುದೀರ್ಘ ಹೋರಾಟವನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ ಮತ್ತು ಕೇಶವಪ್ರಸಾದ್ ಅವರು ಹೋರಾಟಗಾರರ ಮತ್ತು ಜಿಲ್ಲೆಯ ಜನರ ಬೇಡಿಕೆಗೆ ಸರಕಾರ ಸ್ಪಂದಿಸಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಶಾಸಕರ ಪ್ರಶ್ನೆ ಗೆ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಉಸ್ತುವಾರಿ ಸಚಿವ ಮತ್ತು ಜಿಲ್ಲೆಯ ಶಾಸಕರ ಜೊತೆ ಚರ್ಚೆ ಮಾಡಿ ತಿಳಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಗೆ ಮೆಡಿಕಲ್ ಕಾಲೇಜ್ ಮಂಜೂರು ಮಾಡುವ ಅಧಿಕಾರ ಜಿಲ್ಲೆಯ ಜನ ಪ್ರತಿನಿಧಿಗಳ ಮೇಲೆ ಇದೆ. ಜನ ಇವರ ಜನ ವಿರೋಧಿ ಧೋರಣೆಯಿಂದ ಬೀದಿಗೆ ಬಂದಿದ್ದಾರೆ. ಕೊರೆಯುವ ಚಳಿ ಮಧ್ಯೆ ಹೋರಾಟ ನಡೆಯುತ್ತಿದೆ. ಹೋರಾಟ ನಿರತರಿಗೆ ಹೆಚ್ಚು-ಕಮ್ಮಿ ಏನಾದ್ರು ಆದರೆ ಜಿಲ್ಲೆಯ ಸಚಿವರು ಶಾಸಕರೆ ಹೊಣೆ ಹೊರಬೇಕಾಗುತ್ತದೆ. ಎಂದು ಹೋರಾಟಗಾರರು ತಿಳಿಸಿದ್ದಾರೆ. ಪ್ರಾಣ ಹೋದರು ಚಿಂತೆಯಿಲ್ಲ ಸರಕಾರಿ ಆಸ್ಪತ್ರೆ ಖಾಸಗಿ ಆಗಲು ಬಿಡಲ್ಲ ಎಂದು ಹಿರಿಯ ಹೋರಾಟಗಾರು ಪಣ ತೊಟ್ಟಿದ್ದಾರೆ. ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 