ನಗರದಲ್ಲಿ ಬ್ಯಾನರ್ ಗಲಾಟೆ ಪೈರಿಂಗ್ಗಂಭೀರವಾಗಿ ಪರಿಗಣಿಸದ ಸರ್ಕಾರ: ಶ್ರೀರಾಮುಲು
Government not taking banner display and riots in the city seriously: Sriramulu
ಬಳ್ಳಾರಿ 21: ನಗರದಲ್ಲಿ ಬ್ಯಾನರ್ ವಿಷಯದಲ್ಲಿ ನಗರದಲ್ಲಿ ಜ.1 ರಂದು ನಡೆದ ಪೈರಿಂಗ್ ಗಲಾಟೆಯ ಬಗ್ಗೆ ಎಲ್ಲಾ ರೀತಿಯ ಸಾಕ್ಷಿಗಳನ್ನು ನಾನು ಪೊಲೀಸರಿಗೆ ನೀಡಿದೆ. ಆದರೂ ಈ ವಿಷಯದಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.ಅವರು ಇಂದು ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿ. ಪ್ರಕರಣವನ್ನು ಸಿಐಡಿಗೆ ವಹಿಸಿದೆಂದು ಕೈ ಕಟ್ಟಿ ಕುಳಿತಿದೆ.
ಈ ಘಟನೆಯಲ್ಲಿ ನಮಗೆ ನ್ಯಾಯ ದೊರಕುವವರೆಗೆ ನಮ್ಮ ಹೋರಾಟ ನಡೆಯಲಿದೆ. ಮತ್ತೊಮ್ಮೆ ಗೃಹ ಸಚಿವರನ್ನು ಭೇಟಿ ಮಾಡಿ ಈ ವಿಷಯ ಚರ್ಚಿಸಲಿದೆಂದರು.ನಗರದಲ್ಲಿ ಮಟ್ಕಾ, ಜೂಜಾಟ, ಡಗ್ಸ್ ಮಾಫಿಯಾ ಶಾಸಕರ ಬೆಂಬಲದಿಂದ ನಡೆಯುತ್ತದೆ ಎಂದು ಆರೋಪಿಸಿದ ಅವರು. ನಗರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆಂದರು.ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ನಡೆಯಿತು.
ಈಗ ಪಂಚ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಪ್ರಕರಣ ನಡೆಯುತ್ತಿದೆ. ಇದರಲ್ಲಿ ನೇರವಾಗಿ ಅಬಕಾರಿ ಸಚಿವ ಆರಿ್ಬ.ತಿಮ್ಮಾಪುರ ಅವರ ಪುತ್ರ ಭಾಗಿಯಾಗಿದ್ದಾರೆ. ಅದಕ್ಕಾಗಿ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.ಸಿಎಂ ಸೀಟು ಗೊಂದಲ;ರಾಜ್ಯದಲ್ಲಿ ಇನ್ನೂ ಸಿಎಂ ಸೀಟಿನ ಗೊಂದಲ ಬಗೆಹರಿಯದ ಕಾರಣ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಇತರ ರಾಜ್ಯಗಳ ಚುನಾವಣಾ ವೆಚ್ಚಕ್ಕೆ ಕಾಂಗ್ರೆಸ್ ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆಂದು ಆರೋಪಿಸಿದರು.ಕ್ಷಮೆ ಯಾಚನೆ;ಗಾಂಜಾ, ಡ್ರಗ್ಸ್ ನಿಂದ ಓರ್ವ ಬಾಲಕಿ ನಗರದಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಆ ಬಾಲಕಿಯ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವೆ.
ಇದನ್ನು ಪ್ರಸ್ತಾಪ ಮಾಡಬಾರದಿತ್ತು. ಬಾಯಿ ತಪ್ಪಿ ಮಾತಾಡಿದ್ದು. ಅದಕ್ಕಾಗಿ ಆ ಬಾಲಕಿಯ ಕುಟುಂಬದ ಜೊತೆ ಸದಾ ನಾನು ಇರುತ್ತೇನೆ. ಈ ವಿಷಯದಲ್ಲಿ ಕಾನೂನನ್ನು ಎದಿರಿಸುವೆ ಎಂದರು.ಈ ಸುದ್ದಿಗೋಷ್ಟಿಯಲ್ಲಿ ಮಾಜಿ ಸಂಸದ ಸಣ್ಣ ಪಕ್ಕೀರ್ಪ, ಬುಡಾ ಮಾಜಿ ಅಧ್ಯಕ್ಷರು ಪಿ.ಪಾಲಣ್ಣ, ಬಿಜೆಪಿ ಪಕ್ಷದ ಮುಖಂಡರಾದ ತಿಮ್ಮಪ್ಪ, ಓಬಳೇಶ್, ಹಲಕುಂದಿ ಮಲ್ಲಿಕಾರ್ಜುನಗೌಡ, ಕೆ.ಹನುಮಂತಪ್ಪ ಮೊದಲಾದವರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 