ಸರಕಾರಿ ಎಂ.ಪಿ.ಎಸ್ ಶಾಲೆ ಉನ್ನತೀಕರಿಸಲು ಸರಕಾರದ ಆದೇಶ
Government order to upgrade government MPS school
ವಿಜಯಪುರ 09: ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಇಂದು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಕ್ಞತೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ ನಮ್ಮೂರಿನಲ್ಲಿಯೇ ಉತ್ತಮ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ತುಂಬಾ ಸಂತೋಷವಾಗಿದೆ ಎಂದು ಹೇಳಿದರು. ನಂತರ ಪುಷ್ಪ ಮತ್ತು ಸಿಹಿ ನೀಡಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬದ ಶುಭಾಷಯ ಕೋರಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಸೀತಾರಾಮ ನರಳೆ, ತಾ. ಪಂ. ಮಾಜಿ ಅಧ್ಯಕ್ಷ ಸಿದ್ದು ಬೆಳಗಾವಿ, ಮುಖಂಡರಾದ ರಾಮಗೊಂಡ ಚಾವರ, ಸುರೇಶಗೌಡ ಪಾಟೀಲ, ಸಾಬು ಖಂಡೇಕಾರ, ಸುರೇಶ ಜಾನಾಯಿ, ವಿನೋದ ಕೋಟಿ, ಬೀರ್ಪ ಖಂಡೇಕಾರ, ಬಸವರಾಜ ಕಾತ್ರಾಳ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 