ಲಾಕ್ಡೌನ್ ವೇಳೆ ಅಗತ್ಯ ವಸ್ತುಗಳನ್ನು ಸರ್ಕಾರವೇ ಉಚಿತವಾಗಿ ನೀಡಲಿ: ಟಿ.ಎ.ಶರವಣ
ಬೆಂಗಳೂರು, ಏ.4,ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲವು ಅಗತ್ಯ ವಸ್ತುಗಳನ್ನು ಉಚಿತವಾಗಿ ಸರ್ಕಾರವೇ ವಿತರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಶರವಣ, ಮಹಾಮಾರಿ ಕೊರೋನಾ ಸೋಂಕು ತಡೆಗಟ್ಟಲು ಸರ್ಕಾರ ನಿರಂತರವಾಗಿ ಹೋರಾಡುತ್ತಿರುವುದರಿಂದ ರಾಜ್ಯವೇ ಲಾಕ್ಡೌನ್ ಆಗಿ ಸುಮಾರು 10 ದಿನಗಳು ಆಗಿವೆ. ಇಂತಹ ಸಮಯದಲ್ಲಿ ಜನಸಾಮಾನ್ಯರು ಸಹ ಸರ್ಕಾರದ ಜೊತೆ ಕೈಜೋಡಿಸಿ ಈ ಸೋಂಕಿನ ವಿರುದ್ಧ ಹೋರಾಟಕ್ಕಿಳಿದಿರುವುದು ಹೆಮ್ಮೆಯ ಸಂಗತಿ. ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಹಲವಾರು ಸಮಸ್ಯೆಗಳಿಂದ ಜನರು ಕಂಗಾಲಾಗಿರುವುದೂ ಅಷ್ಟೇ ಸತ್ಯ. ಇದನ್ನು ಮನಗಂಡು ಸರ್ಕಾರ ನಿರ್ಗತಿಕರು, ಬಡವರು, ಕೂಲಿಕಾರರು, ಕೊಳಗೇರಿ ವಾಸಿಗಳು ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಕೆಎಂಎಫ್ ವತಿಯಿಂದ ಪ್ರತಿದಿನ 1 ಲೀಟರ್ ಹಾಲು ಮತ್ತು ಉಜ್ವಲ ಯೋಜನೆಯಡಿ ಎಲ್ಪಿಜಿ ಗ್ಯಾಸ್ ಸೌಲಭ್ಯ ಹೊಂದಿರುವ ಫಲಾನುಭವಿಗಳಿಗೆ ಉಚಿತ ಸಿಲಿಂಡರ್ ಪೂರೈಕೆ ಮಾಡಲು ಕ್ರಮಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಈ ಕ್ರಮಗಳು ಸರಿಯಾದ ರೀತಿಯಲ್ಲಿ ಇನ್ನೂ ದುರ್ಬಲ ವರ್ಗದವರಿಗೆ ತಲುಪಿಲ್ಲ. ಹಾಗಾಗಿ ಲಾಕ್ಡೌನ್ ನಂತಹ ಕಷ್ಟದ ಸಮಯದಲ್ಲಿ ತುರ್ತಾಗಿ ಈ ಸೌಲಭ್ಯಗಳು ವ್ಯವಸ್ಥಿತವಾಗಿ ಸಿಗುವಂತಾಗಬೇಕು. ಅದಕ್ಕಾಗಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಟಿ.ಎ.ಶರವಣ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 