ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಗೆ ಚಾಲನೆ
Gram Panchayat building work started
ಮಾಂಜರಿ 17: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಮತ್ತು 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿರುಪಾಕ್ಷ ಫೋತದಾರ್ ಇವರು ಇಂದು ಚಾಲನೆ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಧುರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಅನಿತಾ ದಯಾರ್ಕರ್ ವಹಿಸಿದ್ದರು. ಅತಿಥಿಯಾಗಿ ಉಪಾಧ್ಯಕ್ಷರಾದ ಸಂಜಯ್ ನರವಾಡೆ, ಮಾಜಿ ಜಿ ಪ ಸದಸ್ಯ ಹಾಗು ಹಾಲಿ ಗ್ರಾಮ್ ಪಂಚಾಯತ್ ಸದಸ್ಯರಾದ ಪಾಂಡುರಂಗ ಮನೆ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳಾದ ಮನೋಜ್ ಕಾಂಬಳೆ ಗ್ರಾ ಪ ಸದಸ್ಯ ಶೀತಲ್ ಮಗೆನವರ್ ಶಕೀಲ್ ಮುಲ್ಲಾ ಸುಶಾಂತ ಲಂಬುಗೊಳ್ ಹಾಜರಿದ್ದರು.
ಗ್ರಾಮ ಪಂಚಾಯತ್ ಅಧಿಕಾರಿಗಳಾದ ಶೇಖರ್ ಪಾಟೀಲ್ ಸ್ವಾಗತಿಸಿ ಬಹಳ ದಿನಗಳಿಂದ ಗ್ರಾಮ ಪಂಚಾಯತ್ ಕಟ್ಟಡ ಆಗಬೇಕೆಂಬ ಎಲ್ಲ ಜನರ ಆಸೆಯಿದ್ದು ಅದು ಎಂದು ನನಸಾಗುತ್ತದೆ. ಮುಂದಿನ ದಿನಮಾನಗಳಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಲಾಗುವುದೆಂದು ಪಾಂಡುರಂಗ ಮಾನ ಹೇಳಿದರು.
ಈ ವೇಳೆ ಗ್ರಾ ಪಂ ಸದಸ್ಯರಾದ ಅಶೋಕ್ ಹವಳೆ, ಚಿದಾನಂದ ಪೂಜಾರಿ, ಶಶಿಕಾಂತ್ ಪಾಟೋಳೆ, ಶೀತಲ್ ಯಾದವ್, ವೈಭವ್ ಇಂಗಳೆ, ಶ್ರೀಶೈಲ ಕೋಟಿವಾಲೆ, ಭವನ ಭೀಲವಡೆ, ಬಾಳಸಾಹೇಬ ಗಾಯಗೋಳ, ಸಾಗರ್ ಯಾದವ್, ಅನಿಲ್ ವಗ್ಗೆ, ಸಂಜಯ್ ನಂದ್ರೆ ಇನ್ನುಳಿದ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 