ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಗೆ ಚಾಲನೆ
Gram Panchayat building work started
ಮಾಂಜರಿ 17: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಮತ್ತು 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿರುಪಾಕ್ಷ ಫೋತದಾರ್ ಇವರು ಇಂದು ಚಾಲನೆ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಧುರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಅನಿತಾ ದಯಾರ್ಕರ್ ವಹಿಸಿದ್ದರು. ಅತಿಥಿಯಾಗಿ ಉಪಾಧ್ಯಕ್ಷರಾದ ಸಂಜಯ್ ನರವಾಡೆ, ಮಾಜಿ ಜಿ ಪ ಸದಸ್ಯ ಹಾಗು ಹಾಲಿ ಗ್ರಾಮ್ ಪಂಚಾಯತ್ ಸದಸ್ಯರಾದ ಪಾಂಡುರಂಗ ಮನೆ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳಾದ ಮನೋಜ್ ಕಾಂಬಳೆ ಗ್ರಾ ಪ ಸದಸ್ಯ ಶೀತಲ್ ಮಗೆನವರ್ ಶಕೀಲ್ ಮುಲ್ಲಾ ಸುಶಾಂತ ಲಂಬುಗೊಳ್ ಹಾಜರಿದ್ದರು.
ಗ್ರಾಮ ಪಂಚಾಯತ್ ಅಧಿಕಾರಿಗಳಾದ ಶೇಖರ್ ಪಾಟೀಲ್ ಸ್ವಾಗತಿಸಿ ಬಹಳ ದಿನಗಳಿಂದ ಗ್ರಾಮ ಪಂಚಾಯತ್ ಕಟ್ಟಡ ಆಗಬೇಕೆಂಬ ಎಲ್ಲ ಜನರ ಆಸೆಯಿದ್ದು ಅದು ಎಂದು ನನಸಾಗುತ್ತದೆ. ಮುಂದಿನ ದಿನಮಾನಗಳಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಲಾಗುವುದೆಂದು ಪಾಂಡುರಂಗ ಮಾನ ಹೇಳಿದರು.
ಈ ವೇಳೆ ಗ್ರಾ ಪಂ ಸದಸ್ಯರಾದ ಅಶೋಕ್ ಹವಳೆ, ಚಿದಾನಂದ ಪೂಜಾರಿ, ಶಶಿಕಾಂತ್ ಪಾಟೋಳೆ, ಶೀತಲ್ ಯಾದವ್, ವೈಭವ್ ಇಂಗಳೆ, ಶ್ರೀಶೈಲ ಕೋಟಿವಾಲೆ, ಭವನ ಭೀಲವಡೆ, ಬಾಳಸಾಹೇಬ ಗಾಯಗೋಳ, ಸಾಗರ್ ಯಾದವ್, ಅನಿಲ್ ವಗ್ಗೆ, ಸಂಜಯ್ ನಂದ್ರೆ ಇನ್ನುಳಿದ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 