ವೈಜ್ಞಾನಿಕ ಕನಿಷ್ಠ ಕೂಲಿ ಜಾರಿಗಾಗಿ ಗ್ರಾಪಂ ನೌಕರರ ಆಗ್ರಹ
Gram Panchayat employees demand implementation of scientific minimum wage
ಗೋಕಾಕ, 25 ; ಉಚ್ಚ ನ್ಯಾಯಾಲಯದ ಆದೇಶದಂತೆ ವೈಜ್ಞಾನಿಕ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಗ್ರಾಮ ಪಂಚಾಯತ ನೌಕರರು ಆಗ್ರಹಿಸಿದ್ದಾರೆ.
ಗೋಕಾಕ ತಾಲೂಕಾ ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪರುಶರಾಮ ಗಸ್ತೆ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇತ್ತಿಚಿಗೆ ಬೆಂಗಳೂರಿನಲ್ಲಿ ಧರಣಿ ನಡೆಸುವುದರೊಂದಿಗೆ ವೈಜ್ಞಾನಿಕ ಕನಿಷ್ಠ ಕೂಲಿ ಜಾರಿಗಾಗಿ ಹಾಗೂ ಬಂಡವಾಳಿಗರ ಪರವಾದ ಕಾನೂನು ತಿದ್ದುಪಡಿಗಳನ್ನು ವಿರೋಧಿಸಿ ಸಹಿ ಸಂಗ್ರಹ ಚಳುವಳಿಯನ್ನು ಈಗಾಗಲೇ ಆರಂಭಿಸಲಾಗಿದೆ.
ರಾಜ್ಯ ಸರ್ಕಾರವು ಗ್ರಾಮ ಪಂಚಾಯತ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಿದೆ. ಆದರೆ, ಸರ್ಕಾರ ಜಾರಿ ಮಾಡಿರುವ ಕನಿಷ್ಠ ವೇತನ ಆದೇಶವು ಅವೈಜ್ಞಾನಿಕವಾಗಿದೆ ಎಂದು ನೌಕರರ ಆರೋಪವಾಗಿದೆ. ಉಚ್ಚ ನ್ಯಾಯಾಲಯದ ಆದೇಶದಂತೆಯೇ ವೈಜ್ಞಾನಿಕ ಕನಿಷ್ಠ ಕೂಲಿ ಜಾರಿ ಮಾಡಲು ಆಗ್ರಹಿಸಿದೆ.
ಸರ್ಕಾರವು ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಈ ಉದ್ದಿಮೆಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಬರುವಂತೆ ಆದೇಶಿಸಿತ್ತು. ಈ ಆದೇಶವು ಅವೈಜ್ಞಾನಿಕವಾಗಿದ್ದು ಈ ನಡೆಯನ್ನು ಪ್ರಶ್ನಿಸಿ ಸಂಘವು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮತ್ತೆ ರಿಟ್ ಅರ್ಜಿ ಸಲ್ಲಿಸಿದ ಪ್ರಯುಕ್ತ ಉಚ್ಚ ನ್ಯಾಯಾಲಯವು ಕೆಲ ಅಂಶಗಳನ್ನು ನೀಡಿದ್ದು ಕನಿಷ್ಠ ವೇತನ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸಿದೆ. ಆದರೆ ಈಗ ರಾಜ್ಯ ಸರ್ಕಾರವು ಹೊರಡಿಸಿದ ಆದೇಶವು ಅವೈಜ್ಞಾನಿಕವಾಗಿದೆ ಎಂದು ಸಂಘದ ವಾದವಾಗಿದ್ದು ಈ ಕನಿಷ್ಠ ವೇತನದ ವಿಷಯದ ಕುರಿತು 2021 ರಿಂದ 2025ರ ವರೆಗೆ ನ್ಯಾಯಾಲಯದಲ್ಲಿ ನಡೆದ ವಾದ ವಿವಾದಗಳ ಅಂಶಗಳನ್ನು ಅಧಿಸೂಚನೆಯಲ್ಲಿ ಪರಿಗಣಿಸಿ ಸೇರೆ್ಡ ಮಾಡಿಕೊಂಡು ಜಾರಿ ಮಾಡಬೇಕೆಂದು ಸಂಘದ ಒತ್ತಾಯವಾಗಿದೆ.
ಈ ಅವಧಿಯಲ್ಲಿ ನ್ಯಾಯಾಲಯ ಸೂಚಿಸಿದ ಅರ್ಜಿ ಅಧಿಸೂಚನೆಯಂತೆ ಸುಮಾರು 10 ಅಂಶಗಳನ್ನು ಪರಿಗಣಿಸಿ ಕನಿಷ್ಠ ವೇತನ ನಿಗದಿಪಡಿಸಲು ಆದೇಶ ಹೊರಡಿಸಿದೆ. ಕಾರಣ ನ್ಯಾಯಾಲಯದ ಆದೇಶದ ಅನುಗುಣವಾಗಿಯೇ ಕನಿಷ್ಠ ವೇತನವನ್ನು ನಿಗದಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗೋಕಾಕ ತಾಲೂಕಾ ಗ್ರಾಮ ಪಂಚಾಯತ ನೌಕರ ಸಂಘದ ಅಧ್ಯಕ್ಷ ಮಡ್ಡೆಪ್ಪ ಭಜಂತ್ರಿ,ಕಾರ್ಯದರ್ಶಿ ಬಾಳಪ್ಪ ದುಂಡಾನಟ್ಟಿ, ವಿಜಯ ಸೊಲ್ಲಾಪೂರ, ಆನಂದ ಗುಡಕೇತ್ರ, ಸಂಜೀವ ನಾಯಿಕ, ಸುರೇಶ ಬಾನಸಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 