ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆ
Grand procession of the Durga Devi idol
ತಾಳಿಕೋಟಿ 21 : ಪಟ್ಟಣದ ಮಾದರ ಚೆನ್ನಯ್ಯ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾಮಾತೆಯ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಭವ್ಯ ಮೆರವಣಿಗೆ ಜರುಗಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9-00 ಘಂಟೆಗೆ ಪಟ್ಟಣದ ಅಂಬಾಭವಾನಿ ದೇವಸ್ಥಾನದಿಂದ ಸಕಲ ವಾದ್ಯ ಮೇಳಗಳೊಂದಿಗೆ ಆರಂಭವಾದ ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆಯು ಕತ್ರಿ ಬಜಾರ್, ಪಂಚ ಶಹೀದ ದರ್ಗಾ,ಭೋವಿ ಸಮಾಜದ ಪಿಲೇಕಮ್ಮ ದೇವಸ್ಥಾನ ಮಾರ್ಗವಾಗಿ ಮಾದರ ಚೆನ್ನಯ್ಯ ಬಡಾವಣೆಗೆ ತಲುಪಿ ದೇವಸ್ಥಾನಕ್ಕೆ ಪ್ರವೇಶಿಸಿತು.
ನಂತರ ಸಕಲ ಭಕ್ತಾದಿಗಳಿಗೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೆರವಣಿಗೆಯಲ್ಲಿ ತಾಳಿಕೋಟಿ ಪುರಸಭೆ ಮಾಜಿ ಸದಸ್ಯರಾದ ಪ್ರಭುಗೌಡ ಮದರಕಲ್ಲ, ಜೈಸಿಂಗ್ ಮೂಲಿಮನಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬ ಕೆಂಭಾವಿ, ಸಮಾಜದ ಪ್ರಮುಖರಾದ ಬಸ್ಸು ಮಾದರ, ರಾಮಣ್ಣ ಕಟ್ಟಿಮನಿ, ಗೋಪಾಲ ಕಟ್ಟಿಮನಿ, ಬಸ್ಸಪ್ಪ ಮಾದರ ಹಾಗೂ ಶ್ರೀ ಮಾದರ ಚೆನ್ನಯ್ಯ ಸಮಾಜದ ಬಾಂಧವರು ಅಪಾರ ಸಂಖ್ಯೆಯಲ್ಲಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 