ದಾಂಡೇಲಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಜೆ ಅಜ್ಜ-ಅಜ್ಜಿಯರ ದಿನ ಆಚರಣೆ
Grandparents' Day celebrated on Saturday evening at Dandeli Primary School
ದಾಂಡೇಲಿ ಫೇ 14 : ದಾಂಡೇಲಿಯ ಕೆನರಾವೆಲ್ಫೇರ್ ಟ್ರಸ್ಟಿನ ಇಂಗ್ಲೀಷ್ ಮಿಡಿಯಂ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಜೆ ಅಜ್ಜ-ಅಜ್ಜಿಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಎನ್. ಜಯಚಂದ್ರನ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕ್ರತಿಯಲ್ಲಿ ಕೂಡು ಕುಟುಂಬದ ವ್ಯವಸ್ಥೆಯ ಮಹತ್ವವನ್ನು ವಿವರಿಸಿ, ಹಿಂದೆ ತಂದೆ-ತಾಯಿ, ಚಿಕ್ಕಪ್ಪ, ದೊಡ್ಡಪ,್ಪ ಅಜ್ಜ ಹಿಅಜ್ಜಿ, ಮಕ್ಕಳು ಮೊಮ್ಮಕ್ಕಳು ಒಂದೇ ಸೂರಿನಡಿ ಪ್ರೀತಿ ವಿಶ್ವಾಸದಿಂದ ಬದುಕುತ್ತಿದ್ದೆವು. ಹಬ್ಬ- ಹರಿದಿನ, ಸಾಮೂಹಿಕ ಭೋಜನ ಎಲ್ಲವೂ ಕುಟುಂಬದ ಭಾಂಧವ್ಯವನ್ನು ಗಟ್ಟಿಗೊಳಿಸುತ್ತಿತ್ತು.
ಆದರೆ ಇಂದು ಆ ವ್ಯವಸ್ಥೆ ನಿಧಾನವಾಗಿ ಕ್ಷೀಣಿಸುತ್ತಿದೆ ಎಂದು ವಿಷಾದ ವ್ಯಕ್ತ ಪಡಿಸಿದರು. 1978 ರಲ್ಲಿ ಅಮೇರಿಕಾದಲ್ಲಿ ಆರಂಭವಾದ ಗ್ಯ್ರಾಂಡ್ ಪೇರೆಂಟ್ಸ್ ಡೇ, ಹಿನ್ನೆಲಯನ್ನು ವಿವರಿಸಿದ ಅವರು ಅಜ್ಜ-ಅಜ್ಜಿಯರ ನಿಷ್ಕಲ್ಮಶ ಪ್ರೀತಿಯ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ಮಕ್ಕಳನ್ನು ಅಜ್ಜ-ಅಜ್ಜಿಯರ ಪ್ರೀತಿಯಿಂದ ದೂರಮಾಡಬಾರದು ಎಂದು ಪಾಲಕರಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯಾಧ್ಯಾಪಕ ನಾರಾಯಣ ನಾಯ್ಕ ಮಾತನಾಡಿ, ಸಂಬಂಧಗಳ ಕೊಂಡಿಗಳು ಕಳಚದಂತೆ ಮಕ್ಕಳಲ್ಲಿ ಅಜ್ಜ-ಅಜ್ಜಿಯರ ಪ್ರೀತಿ, ಮಾರ್ಗದರ್ಶನ ದೊರೆಯುವಂತೆ ಮಾಡುವದು ಪಾಲಕರ ಕರ್ತವ್ಯ ಎಂದು ನುಡಿದರು. ಕಾರ್ಯಕ್ರಮದ ಅತಿಥಿಗಳಾಗಿ ಪ್ರಶಾಂತ ಬಸ್ರೂತೇಕರ್, ರಾಘವೇಂದ್ರ ಗಡಕರ್, ರೇಣುಕಾ ಕಿಲ್ಲೆಕರ್, ಅಶೋಕ ಮಾನೆ, ಶಿಕ್ಷಕರಾದ ಸುಜಾತಾ ಬೋಜ್, ಫಿರ್ದೋಶ್ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 