ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು: ಶಾಸಕ ಐಹೊಳೆ
Greater emphasis on development of rural roads: MLA Aihole
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು: ಶಾಸಕ ಐಹೊಳೆ
ರಾಯಬಾಗ 11: ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ರಸ್ತೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ತಾಲೂಕಿನ ಕಂಕಣವಾಡಿ ಪಟ್ಟಣದಲ್ಲಿ ಜಿ.ಪಂ. ಇಲಾಖೆಯಿಂದ ಮಂಜೂರಾದ 50 ಲಕ್ಷ ರೂ. ಅನುದಾನದಲ್ಲಿ ಕಂಕಣವಾಡಿ-ಕೊಡ್ಡಿನ ತೋಟದ ರಸ್ತೆ ಡಾಂಬರೀಕರಣ ಮತ್ತು 20 ಲಕ್ಷ ರೂ.ಅನುದಾನದಲ್ಲಿ ಕಂಕಣವಾಡಿ-ಸವಸುದ್ದಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳನ್ನು ಶೀಘ್ರ ಮಾರುಕಟ್ಟೆಗಳಿಗೆ ಸಾಗಿಸಲು ಮತ್ತು ಗ್ರಾಮೀಣ ಭಾಗದ ಜನರು ತಾಲೂಕು ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಿಗೆ ಪ್ರಯಾಣಿಸಲು ಗುಣಮಟ್ಟದ ರಸ್ತೆಗಳು ಅವಶ್ಯಕವಾಗಿದೆ. ಗುತ್ತಿಗೆದಾರರು ಗುಣಮಟ್ಟದ ರಸ್ತೆಗಳನ್ನು ಶೀಘ್ರವಾಗಿ ನಿರ್ಮಾಣ ಮಾಡುವುದರ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.ಜಿ.ಪಂ.ಎಇಇ ವಿ.ಆರ್. ಭಜಂತ್ರಿ, ಮುಖಂಡರಾದ ಸದಾಶಿವ ಘೋರೆ್ಡ, ರಾಜಶೇಖರ ಖನದಾಳೆ, ಅಪ್ಪಾಸಾಬ ಬ್ಯಾಕೂಡೆ, ನಟರಾಜ ಮಾವರಕರ, ಹಾಲಪ್ಪ ಪೀರಗೀಪಾಟೀಲ, ಭೀಮಪ್ಪ ನಾಯಿಕವಾಡಿ, ರಮೇಶ ಪೂಜಾರಿ, ಬಸವರಾಜ ಬೆಳಕೂಡ, ಮಹಾಂತೇಶ ಹತ್ತರಕಿ, ಅಶೋಕ ಪಾಮದಿನ್ನಿ, ವೀರೇಂದ್ರ ಬ್ಯಾಕೂಡೆ, ವಿಠ್ಠಲ ಗುಡೆನ್ನವರ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 