ಗುಂಪು ಘರ್ಷಣೆ: ವ್ಯಕ್ತಿಗೆ ಚೂರಿ ಇರಿತ, ವಾಹನಗಳಿಗೆ ಬೆಂಕಿ
Group clash: Man stabbed, vehicles set on fire
ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ ಪೊಲೀಸರು
ಸಂಬರಗಿ 26: ಗ್ರಾಮದಲ್ಲಿ ಸೆ. 23ರಂದು ಗುಂಪು ಘರ್ಷಣೆಯಲ್ಲಿ ಸಂಜಯ ರಾಮಚಂದ್ರ ಟೋಣೆ ಇವರಿಗೆ ಹೊಟ್ಟೆಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಂಡಿದ್ದು, ಮೀರಜ ಆಸ್ಪತ್ರೆಗೆ ದಾಖಲ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಸಂಶಯಿತ ಆರೋಪಿಗಳನ್ನು ಪೊಲೀಸರು ತನಿಖೆ ನಡೆಸಿದ್ದಾರೆ.
ಸಂಬರಗಿ ಗ್ರಾಮದಲ್ಲಿ ಸಪ್ಟೆಂಬರ 23ರಂದು ಸಾಯಂಕಾಲ ದಾದಾಸಾಹೇಬ ಶಂಕರ ಟೋಣೆ ಹಾಗೂ ಸಂಜಯ ಟೋಣೆ ಇವರ ನಡುವೆ ನಡೆದ ಜಟಾಪಟಿಯಲ್ಲಿ ಇವನಿಗೆ ಚೂರಿ ಇರಿದು ಗಾಯಗೊಳಿಸಿದ್ದಾರೆ. ಚಿಕ್ಕ ಜಗಳದಿಂದ ಇಷ್ಟರ ಮಟ್ಟಿಗೆ ಜಗಳ ಮುಂದುವರೆದಿದ್ದು, ಇವರ ಮನೆಯ ಎದುರಿಗೆ ಇದ್ದ 3 ಬೈಕ್ಗಳು, 1 ಗೂಡ್ಸ್ ಬುಲೆರೋಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಸಂಶಯಿತ ಆರೋಪಿಗಳನ್ನು ಹಿಡಿಯಲು ಪೋಲಿಸರು ಜಾಲ ಬೀಸಿದ್ದಾರೆ.
ಸಿ.ಸಿ ಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಆ ಕ್ಯಾಮರಾ ಪುಟೆಜ್ವನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೋಲಿಸ್ ಮೂಲಗಳು ತಿಳಿಸಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 