ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣ: ಫಲಾನುಭವಿಗಳೊಂದಿಗೆ ಸಂವಾದ
Gruha Lakshmi Scheme Completes Three Years: Interaction with Beneficiaries
ಬ್ಯಾಡಗಿ 20 : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ ಯೋಜನೆಯು ಜಾರಿಯಾಗಿ ಮೂರು ವರ್ಷಗಳು ಪೂರ್ಣಗೊಂಡಿದ್ದು, ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಸಸಿಗಳನ್ನು ನೆಟ್ಟು ಯೋಜನೆ ಸಾಧನೆಯನ್ನು ಸಂಭ್ರಮಿಸಿ ಬಳಿಕ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಾಯಿತು. ತಾಲೂಕು ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಮಲ್ಲಿಕಾರ್ಜುನ್ ಮಾತನಾಡಿ ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಹಾಗೂ ಇತರೆ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳಬೇಕೆಂದು ರಾಜ್ಯ ಸರ್ಕಾರ ಸರಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು ಮಹಿಳೆಯರು ಸ್ವಾವಲಂಬಿಗಳಾಗಲಿ ಎಂದು ಸರಕಾರ ಪ್ರತಿ ಮನೆಯ ಕುಟುಂಬದ ಮಹಿಳೆಗೆ 2000 ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಂಭನಗೌಡ ಪಾಟೀಲ ಮಾತನಾಡಿ, ಗೃಹಲಕ್ಷಿಯಿಂದಾಗಿ ಮಹಿಳೆಯರಿಗೆ ಅನುಕೂಲವಾಗಿದ್ದು, ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ. ಉಳಿದ ಗ್ಯಾರಂಟಿಗಳು ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಇದು ಖುಷಿಯ ಸಂಗತಿ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಮಲ್ಲಿಕಾರ್ಜುನ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ. ಗ್ಯಾರಂಟಿ ಸದಸ್ಯರಾದ ರಮೇಶ್ ಕೋಟಿಯವರ. ಪಿರಾಂಬಿ ವರದಿ. ಬಾಬು ಸಾಬ್ ಓಲೆಕಾರ್. ಎಲ್ಲಾ ತಾಲೂಕು ಗ್ಯಾರಂಟಿ ಸದಸ್ಯರು ಹಾಗೂ ಅಂಗನವಾಡಿಯ ಶಿಕ್ಷಕಿಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 