ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Guarantee schemes are only for the poor: Minister Lakshmi Hebbalkar
ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ
ಬೆಂಗಳೂರು 03: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ... ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು. ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 