ಕುರಿಗಾಹಿಗಳಿಗೆ ಸರ್ಕಾರದ ಸೌಲಭ್ಯ ಒದಗಿಸಿಕೊಡಲು ಗುಡದಪ್ಪ ಮನವಿ
Gudadappa appeals to provide government facilities to shepherds
ಕುರಿಗಾಹಿಗಳಿಗೆ ಸರ್ಕಾರದ ಸೌಲಭ್ಯ ಒದಗಿಸಿಕೊಡಲು ಗುಡದಪ್ಪ ಮನವಿ
ಕೊಪ್ಪಳ 05: ಕುರಿಗಾರರಿಗೆ ಈ ಹಿಂದೆ ನೀಡಲಾಗಿದ್ದ ಅಮೃತ ಯೋಜನೆ, ಪುನಃ ಜಾರಿ ಮಾಡಬೇಕು ಕುರಿಗಳಿಗೆ ಓಷಧಿ ಸರಿಯಾದ ರೀತಿಯಲ್ಲಿ ಸಿಗುತ್ತಿಲ್ಲ ಇದರಿಂದ ಕುರಿಗಾಹಿಗಳಿಗೆ ಸಾಕಷ್ಟು ತೊಂದರೆ ಮತ್ತು ನಷ್ಟ ಉಂಟಾಗುತ್ತಿದೆ ಕೂಡಲೇ ಸರ್ಕಾರ ಕುರಿಗಾಹಿಗಳಿಗೆ ಸಿಗುವಂತಹ ನ್ಯಾಯ ಸಮ್ಮತವಾದಂತ ಸೌಲಭ್ಯಗಳನ್ನು ನೀಡಬೇಕೆಂದು ಸರಕಾರಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಲೂಕಿನ ಹಲಗೇರಿ ಗ್ರಾಮದ ಮುಖಂಡ ಹಾಗೂ ಶ್ರೀ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗುಡದಪ್ಪ ಬಾನಪ್ಪನವರ್ ಹಲಗೇರಿ ಸರ್ಕಾರಕ್ಕೆ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ,ಈ ಕುರಿತು ಹೇಳಿಕೆ ನೀಡಿದ ಅವರು ಕುರಿಗಾಹಿಗಳಿಗೆ ಗುರುತಿನ ಚೀಟಿಗಳನ್ನು ಸಮರ್ಕವಾಗಿ ವಿತರಿಸಬೇಕು ,ಅಲ್ಲದೇ ಈಗ ನಡೆಯುತ್ತಿರುವ ಗಣತಿ ಸಮೀಕ್ಷಾ ಕಾರ್ಯ ಕ್ರಮಬದ್ಧವಾಗಿ ನಡೆಯಬೇಕು ಅದಕ್ಕೆ ಸಂಬಂಧಿಸಿದ ನೌಕರರಿಗೆ ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಜಾರಿಗೊಳಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಒತ್ತಾಯಿಸಿದರು, ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಇತರ ಸಚಿವರಿಗೆ, ನಾವುಗಳು ಡೊಳ್ಳು ಬಾರಿಸುವುದರ ಮೂಲಕ ಅವರಿಗೆ ಅದ್ದೂರಿಯಾಗಿ ಸ್ವಾಗತಿಸುತ್ತೇವೆ ಎಂದು ಗುಡದಪ್ಪ ಬಾನಪ್ಪ ನವರ ಹಲಿಗೇರಿ ತಿಳಿಸಿದ್ದಾರೆ ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 