ವಾಯು ಚಂಡಮಾರುತದ ಅಪಾಯದಿಂದ ಗುಜರಾತ್ ಪಾರು: ಸಿಎಂ ರೂಪಾನಿ
ಗಾಂಧಿನಗರ, ಜೂನ್ 14 : ತೀವ್ರ ಆತಂಕಕ್ಕೆ ಕಾರಣವಾಗಿದ್ದ ವಾಯು ಚಂಡಮಾರುತದ ಅಪಾಯದಿಂದ ಗುಜರಾತ್ ಪಾರಾಗಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ.
ಶುಕ್ರವಾರ ಉನ್ನತ ಮಟ್ಟದ ಸಮಿತಿಯು ಪರಿಸ್ಥಿತಿಯ ಅವಲೋಕನದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಯು ಮಾರುತದಿಂದ ಸಂಭವಿಸಬಹುದಾಗಿದ್ದ ಅಪಾಯದಿಂದ ರಾಜ್ಯ ಪಾರಾಗಿದ್ದು, ಸಹಜ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದಿದ್ದಾರೆ.
ಕರಾವಳಿಯ ತಗ್ಗು ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದ 2 ಲಕ್ಷದ 75 ಸಾವಿರ ಜನರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾರೆ.
ವಾಯು ಚಂಡಮಾರುತ ಪರಿಣಾಮ ಬೀರಬಹುದಾದ ಪ್ರದೇಶಗಳಿಗೆ ನಿಯೋಜಿಸಿದ್ದ ಅಧಿಕಾರಿಗಳು ಹಾಗೂ ಸಚಿವರು ತಮ್ಮ ಕೆಲಸಗಳಿಗೆ ವಾಪಸಾಗಿದ್ದಾರೆ. ಸಾರಿಗೆ ಸಂಚಾರ ಯಥಾಸ್ಥಿತಿಯಲ್ಲಿದೆ ಎಂದು ತಿಳಿಸಿದ್ದಾರೆ.
ವಾಯು ಮಾರುತದಿಂದ ಭಾರಿ ಗಾಳಿ, ಮಳೆ ಸಂಭವಿಸುವ ಮುನ್ಸೂಚನೆಯಿದ್ದ ಕಾರಣ, 2 ದಿನಗಳಿಂದ ನಿಷೇಧಿಸಿದ್ದ ಸೋಮನಾಥ ದೇವಾಲಯಕ್ಕೆ ಪ್ರವಾಸಿಗರ ಪ್ರವೇಶವನ್ನು ತೆರವುಗೊಳಿಸಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 