ವಾಯು ಚಂಡಮಾರುತದ ಅಪಾಯದಿಂದ ಗುಜರಾತ್ ಪಾರು: ಸಿಎಂ ರೂಪಾನಿ
ಗಾಂಧಿನಗರ, ಜೂನ್ 14 : ತೀವ್ರ ಆತಂಕಕ್ಕೆ ಕಾರಣವಾಗಿದ್ದ ವಾಯು ಚಂಡಮಾರುತದ ಅಪಾಯದಿಂದ ಗುಜರಾತ್ ಪಾರಾಗಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ.
ಶುಕ್ರವಾರ ಉನ್ನತ ಮಟ್ಟದ ಸಮಿತಿಯು ಪರಿಸ್ಥಿತಿಯ ಅವಲೋಕನದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಯು ಮಾರುತದಿಂದ ಸಂಭವಿಸಬಹುದಾಗಿದ್ದ ಅಪಾಯದಿಂದ ರಾಜ್ಯ ಪಾರಾಗಿದ್ದು, ಸಹಜ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದಿದ್ದಾರೆ.
ಕರಾವಳಿಯ ತಗ್ಗು ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದ 2 ಲಕ್ಷದ 75 ಸಾವಿರ ಜನರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾರೆ.
ವಾಯು ಚಂಡಮಾರುತ ಪರಿಣಾಮ ಬೀರಬಹುದಾದ ಪ್ರದೇಶಗಳಿಗೆ ನಿಯೋಜಿಸಿದ್ದ ಅಧಿಕಾರಿಗಳು ಹಾಗೂ ಸಚಿವರು ತಮ್ಮ ಕೆಲಸಗಳಿಗೆ ವಾಪಸಾಗಿದ್ದಾರೆ. ಸಾರಿಗೆ ಸಂಚಾರ ಯಥಾಸ್ಥಿತಿಯಲ್ಲಿದೆ ಎಂದು ತಿಳಿಸಿದ್ದಾರೆ.
ವಾಯು ಮಾರುತದಿಂದ ಭಾರಿ ಗಾಳಿ, ಮಳೆ ಸಂಭವಿಸುವ ಮುನ್ಸೂಚನೆಯಿದ್ದ ಕಾರಣ, 2 ದಿನಗಳಿಂದ ನಿಷೇಧಿಸಿದ್ದ ಸೋಮನಾಥ ದೇವಾಲಯಕ್ಕೆ ಪ್ರವಾಸಿಗರ ಪ್ರವೇಶವನ್ನು ತೆರವುಗೊಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 