ವಾಯು ಚಂಡಮಾರುತದ ಅಪಾಯದಿಂದ ಗುಜರಾತ್ ಪಾರು: ಸಿಎಂ ರೂಪಾನಿ
ಗಾಂಧಿನಗರ, ಜೂನ್ 14 : ತೀವ್ರ ಆತಂಕಕ್ಕೆ ಕಾರಣವಾಗಿದ್ದ ವಾಯು ಚಂಡಮಾರುತದ ಅಪಾಯದಿಂದ ಗುಜರಾತ್ ಪಾರಾಗಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ.
ಶುಕ್ರವಾರ ಉನ್ನತ ಮಟ್ಟದ ಸಮಿತಿಯು ಪರಿಸ್ಥಿತಿಯ ಅವಲೋಕನದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಯು ಮಾರುತದಿಂದ ಸಂಭವಿಸಬಹುದಾಗಿದ್ದ ಅಪಾಯದಿಂದ ರಾಜ್ಯ ಪಾರಾಗಿದ್ದು, ಸಹಜ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದಿದ್ದಾರೆ.
ಕರಾವಳಿಯ ತಗ್ಗು ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದ 2 ಲಕ್ಷದ 75 ಸಾವಿರ ಜನರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾರೆ.
ವಾಯು ಚಂಡಮಾರುತ ಪರಿಣಾಮ ಬೀರಬಹುದಾದ ಪ್ರದೇಶಗಳಿಗೆ ನಿಯೋಜಿಸಿದ್ದ ಅಧಿಕಾರಿಗಳು ಹಾಗೂ ಸಚಿವರು ತಮ್ಮ ಕೆಲಸಗಳಿಗೆ ವಾಪಸಾಗಿದ್ದಾರೆ. ಸಾರಿಗೆ ಸಂಚಾರ ಯಥಾಸ್ಥಿತಿಯಲ್ಲಿದೆ ಎಂದು ತಿಳಿಸಿದ್ದಾರೆ.
ವಾಯು ಮಾರುತದಿಂದ ಭಾರಿ ಗಾಳಿ, ಮಳೆ ಸಂಭವಿಸುವ ಮುನ್ಸೂಚನೆಯಿದ್ದ ಕಾರಣ, 2 ದಿನಗಳಿಂದ ನಿಷೇಧಿಸಿದ್ದ ಸೋಮನಾಥ ದೇವಾಲಯಕ್ಕೆ ಪ್ರವಾಸಿಗರ ಪ್ರವೇಶವನ್ನು ತೆರವುಗೊಳಿಸಲಾಗಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 