ಗುಂಡಿನ ಚಕಮಕಿ: ಕುಖ್ಯಾತ ದರೋಡೆಕೋರನ ಸೆರೆ
ನವದೆಹಲಿ, ಅ 17: ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ದೆಹಲಿ ವಿಶೇಷ ಪೊಲೀಸ್ ಪಡೆ ನಡೆಸಿದ ಕಾರ್ಯಾಚರಣೆಯನ್ನು ಕುಖ್ಯಾತ ದರೋಡೆಕೋರನನ್ನು ಬಂಧಿಸಲಾಗಿದೆ. ದ್ವಾರಕ ಮೆಟ್ರೋ ನಿಲ್ದಾಣದ ಬಳಿ ಬೆಳಗಿನ ಜಾವ 5. 20ರ ಸುಮಾರಿಗೆ 13 ಸುತ್ತು ಗುಂಡಿನ ಕಾರ್ಯಾಚರಣೆ ನಡೆಸಿ, ಕುಖ್ಯಾತ ತೆವಾತಿಯಾ ಗ್ಯಾಂಗ್ ನ ಮುಖಂಡ ಪ್ರಿನ್ಸ್ ತೆವಾತಿಯಾನನ್ನು ಬಂಧಿಸಲಾಯಿತು. ಆದರೆ ಈ ಗ್ಯಾಂಗ್ ನ ಮತ್ತೋರ್ವ ಸದಸ್ಯ ಪ್ರಮೋದ್ ಪರಾರಿಯಾಗಿದ್ದಾನೆ ಎಂದು ಪೊಲೀಸರ ಮಾಹಿತಿ ತಿಳಿಸಿದೆ. ತೆವಾತಿಯಾ ಗ್ಯಾಂಗ್ ಇತ್ತೀಚೆಗಷ್ಟೆ ನಂದು ಗ್ಯಾಂಗ್ ಜತೆ ಕೈ ಜೋಡಿಸಿತ್ತು. ಪೆರೋಲ್ ಪಡೆದು ಜೈಲಿನಿಂದ ಹೊರಬಂದಿದ್ದ ಪ್ರಿನ್ಸ್ ತೆವಾತಿಯಾ, ಜೈಲಿಗೆ ವಾಪಸಾಗದೆ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದ. ಈ ಸಂದರ್ಭದಲ್ಲಿ ಆತನ ವಿರುದ್ಧ 6ಕ್ಕೂ ಹೆಚ್ಚು ಕೊಲೆ ಹಾಗೂ ಕೊಲೆ ಯತ್ನದ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಗುರುವಾರದ ಕಾರ್ಯಾಚರಣೆಯ ವೇಳೆ ಪರಾರಿಯಾಗಿರುವ ಪ್ರಮೋದ್ ಕೂಡ ಪೆರೋಲ್ ಮೂಲಕ ಹೊರಬಂದು ಪೊಲೀಸರ ಕಣ್ತಪ್ಪಿಸಿ ಕುಕೃತ್ಯದಲ್ಲಿ ತೊಡಗಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 