ಗುಂಡಿನ ಚಕಮಕಿ: ಕುಖ್ಯಾತ ದರೋಡೆಕೋರನ ಸೆರೆ
ನವದೆಹಲಿ, ಅ 17: ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ದೆಹಲಿ ವಿಶೇಷ ಪೊಲೀಸ್ ಪಡೆ ನಡೆಸಿದ ಕಾರ್ಯಾಚರಣೆಯನ್ನು ಕುಖ್ಯಾತ ದರೋಡೆಕೋರನನ್ನು ಬಂಧಿಸಲಾಗಿದೆ. ದ್ವಾರಕ ಮೆಟ್ರೋ ನಿಲ್ದಾಣದ ಬಳಿ ಬೆಳಗಿನ ಜಾವ 5. 20ರ ಸುಮಾರಿಗೆ 13 ಸುತ್ತು ಗುಂಡಿನ ಕಾರ್ಯಾಚರಣೆ ನಡೆಸಿ, ಕುಖ್ಯಾತ ತೆವಾತಿಯಾ ಗ್ಯಾಂಗ್ ನ ಮುಖಂಡ ಪ್ರಿನ್ಸ್ ತೆವಾತಿಯಾನನ್ನು ಬಂಧಿಸಲಾಯಿತು. ಆದರೆ ಈ ಗ್ಯಾಂಗ್ ನ ಮತ್ತೋರ್ವ ಸದಸ್ಯ ಪ್ರಮೋದ್ ಪರಾರಿಯಾಗಿದ್ದಾನೆ ಎಂದು ಪೊಲೀಸರ ಮಾಹಿತಿ ತಿಳಿಸಿದೆ. ತೆವಾತಿಯಾ ಗ್ಯಾಂಗ್ ಇತ್ತೀಚೆಗಷ್ಟೆ ನಂದು ಗ್ಯಾಂಗ್ ಜತೆ ಕೈ ಜೋಡಿಸಿತ್ತು. ಪೆರೋಲ್ ಪಡೆದು ಜೈಲಿನಿಂದ ಹೊರಬಂದಿದ್ದ ಪ್ರಿನ್ಸ್ ತೆವಾತಿಯಾ, ಜೈಲಿಗೆ ವಾಪಸಾಗದೆ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದ. ಈ ಸಂದರ್ಭದಲ್ಲಿ ಆತನ ವಿರುದ್ಧ 6ಕ್ಕೂ ಹೆಚ್ಚು ಕೊಲೆ ಹಾಗೂ ಕೊಲೆ ಯತ್ನದ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಗುರುವಾರದ ಕಾರ್ಯಾಚರಣೆಯ ವೇಳೆ ಪರಾರಿಯಾಗಿರುವ ಪ್ರಮೋದ್ ಕೂಡ ಪೆರೋಲ್ ಮೂಲಕ ಹೊರಬಂದು ಪೊಲೀಸರ ಕಣ್ತಪ್ಪಿಸಿ ಕುಕೃತ್ಯದಲ್ಲಿ ತೊಡಗಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 