ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಗುರುಪೂರ್ಣಿಮೆ ಆಚರಣೆ

ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಗುರುಪೂರ್ಣಿಮೆ ಆಚರಣೆ  Guru Purnima celebration at Ghanamateshwar Educational Institute

ತಾಳಿಕೋಟಿ 12: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಹಾಗೂ  ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವವನ್ನು ದಿ. 10ರಂದು ಆಚರಿಸಲಾಯಿತು.  

ಸಂಸ್ಥೆಯ ಅಧ್ಯಕ್ಷ ಎಸ್‌.ಎಂ.ಸಜ್ಜನ ಅವರು ಮಾತನಾಡಿ ಗುರುವಿನ ಮಹತ್ವ, ಶ್ರೇಷ್ಠತೆ, ಬಾರತೀಯ ಸಂಸ್ಕೃತಿಯಲ್ಲಿ ಗುರುವಿನ ಸ್ಥಾನ ಅತಂತ್ಯ ಶ್ರೇಷ್ಠವಾದದ್ದು ಅಂಧಕಾರವನ್ನು ತೊಲಗಿಸಿ ಸುಜ್ಞಾನ ಜ್ಯೋತಿಯನ್ನು ಬೆಳಗಿಸುವ ಗುರು ಪ್ರತ್ಯಕ್ಷ ದೇವರು ಎಂದು ನಾವು ಎಲ್ಲರೂ  ಗುರುಗಳನ್ನು ಸ್ಮರಿಸುತ್ತಾ ಹಾಗೆ ಭಕ್ತಿ ಭಂಡಾರಿ ಬಸವಣ್ಣನವರ ಪ್ರೀತಿಯ ಶಿಷ್ಯರಾಗಿರುವ ಹಡಪದ ಅಪ್ಪಣ್ಣನವರ ಚವನಗಳ ಸಾರ, ಅವರ ಕಾಯಕ, ಅವರ ಆದರ್ಶ ಮತ್ತು ಮೌಲ್ಯಗಳು ಇಂದಿನ ಸಮಾಜಕ್ಕೆ ಮತ್ತು ವಿದ್ಯಾಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು ಅವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು.  

ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್‌.ಎಸ್‌.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯರು ಬಿ.ಎಸ್ ಮಾಲಿಪಾಟೀಲ್, ಸಿಬಿಎಸ್‌ಇ ಪ್ರಾಚಾರ್ಯರು,ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್‌.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.