ರಾಯಣ್ಣನ ಹುತಾತ್ಮ ದಿನ ಮನೆಗಳಲ್ಲಿ ದೀಪ ಬೆಳಗಿಸಿ: ಗುರುನಾಥ ಕರೆ
Gurunath calls for lighting lamps in homes on Rayanna's martyrdom day
ದೇವರಹಿಪ್ಪರಗಿ 23: ಪ್ರತಿಯೊಬ್ಬ ಕನ್ನಡಿಗರು ತಮ್ಮ ಮನೆಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನದಂದು ದೀಪ ಬೆಳಗಿಸುವ ಮೂಲಕ ಅವರ ತ್ಯಾಗ, ಶೌರ್ಯ ಹಾಗೂ ಆದರ್ಶಗಳನ್ನು ಸ್ಮರಿಸುವಂತೆ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಗುರುನಾಥ ಮುರಡಿ ಕರೆ ನೀಡಿದ್ದಾರೆ.ಶುಕ್ರವಾರದಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅಗಸ್ಟ್ 15ರಂದು ಅವರ ಜನ್ಮದಿನ ಹಾಗೂ ಜನವರಿ 26ರಂದು ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನ ಎರಡು ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅವರ ಫೋಟೋ ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ದೇಶದ ಸ್ವಾತಂತ್ರ್ಯಕ್ಕಾಗಿ ರಾಯಣ್ಣನ ಜೊತೆ ಆರು ಜನ ವೀರ ಮರಣ ಹೊಂದಿದ್ದಾರೆ, ಜನವರಿ 26ರ ಅವರು ಹುತಾತ್ಮ ದಿನವಾಗಿದ್ದು, ದೇಶ ಪ್ರೇಮದ ಸಂಕೇತವಾಗಿ ನಮ್ಮೆಲ್ಲರ ಹೃದಯದಲ್ಲಿ ರಾಯಣ್ಣ ಅಜರಾಮರಾಗಿದ್ದು ಅವರ ಸ್ಮರಣೆಗಾಗಿ ಪ್ರತಿಯೊಬ್ಬರ ಮನೆಗಳಲ್ಲಿ ದೀಪ ಬೆಳಗಿಸುವುದರಿಂದ ಮಕ್ಕಳಿಗೆ ರಾಯಣ್ಣನ ವೀರಗಾಥೆಗಳನ್ನು ತಿಳಿಸುವ ಮೂಲಕ ಅವರಂತೆ ದೇಶ ಪ್ರೇಮಿಗಳಾಗಲು ಸ್ಪೂರ್ತಿ ನೀಡಬೇಕಾಗಿದೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ಅರ್ಿಸಿದ ರಾಯಣ್ಣನಿಗೆ ಗೌರವ ಸಲ್ಲಿಸಲು ಪ್ರತಿಯೊಬ್ಬರ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನದಂದು ರಾಯಣ್ಣನಿಗೆ ನಮನ ಸಲ್ಲಿಸಿ ಮಹಾನ್ ವೀರನ ತ್ಯಾಗವನ್ನು ಈ ಬಾರಿ ವಿಶಿಷ್ಟವಾಗಿ ಸ್ಮರಿಸೋಣ ಎಂದು ಕರೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 