ಜುಲೈ 10 ರಂದು ಗುರುವಂದನೆ ಕಾರ್ಯಕ್ರಮ
Guruvandane program on 10th July
ಬೆಳಗಾವಿ 07: ನಾಗನೂರು ರುದ್ರಾಕ್ಷಿ ಮಠ ಹಾಗೂ ಪ್ರಭುದೇವ ಪ್ರತಿಷ್ಠಾನ ಮಾತೃ ಮಂಡಳಿಯ ಸಹಯೋಗದೊಂದಿಗೆ ಜುಲೈ 10 ರಂದು ಇಲ್ಲಿನ ಶಿವಬಸವ ನಗರದ ರುದ್ರಾಕ್ಷಿ ಮಠದ ಪ್ರಭುದೇವ ಸಭಾಗೃಹದಲ್ಲಿ ಗುರುಪೂರ್ಣಿಮೆಯ ನಿಮಿತ್ತ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಗುರುವಂದನ ಕಾರ್ಯಕ್ರಮದ ಸಾನಿಧ್ಯವನ್ನು ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಸಮ್ಮುಖವನ್ನು ಮಲ್ಲನಕೇರಿ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಾಡಿನ ಧಾರ್ಮಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಧಾರವಾಡ ಮುರುಗಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳವರಿಗೆ ಗುರುವಂದನೆ ಸಲ್ಲಿಸಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಧಾರವಾಡದ ಹಿರಿಯ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಇವರಿಗೆ ಗೌರವ ಸನ್ಮಾನ ಮಾಡಲಾಗುವುದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 