ಜುಲೈ 10 ರಂದು ಗುರುವಂದನೆ ಕಾರ್ಯಕ್ರಮ
Guruvandane program on 10th July
ಬೆಳಗಾವಿ 07: ನಾಗನೂರು ರುದ್ರಾಕ್ಷಿ ಮಠ ಹಾಗೂ ಪ್ರಭುದೇವ ಪ್ರತಿಷ್ಠಾನ ಮಾತೃ ಮಂಡಳಿಯ ಸಹಯೋಗದೊಂದಿಗೆ ಜುಲೈ 10 ರಂದು ಇಲ್ಲಿನ ಶಿವಬಸವ ನಗರದ ರುದ್ರಾಕ್ಷಿ ಮಠದ ಪ್ರಭುದೇವ ಸಭಾಗೃಹದಲ್ಲಿ ಗುರುಪೂರ್ಣಿಮೆಯ ನಿಮಿತ್ತ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಗುರುವಂದನ ಕಾರ್ಯಕ್ರಮದ ಸಾನಿಧ್ಯವನ್ನು ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಸಮ್ಮುಖವನ್ನು ಮಲ್ಲನಕೇರಿ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಾಡಿನ ಧಾರ್ಮಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಧಾರವಾಡ ಮುರುಗಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳವರಿಗೆ ಗುರುವಂದನೆ ಸಲ್ಲಿಸಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಧಾರವಾಡದ ಹಿರಿಯ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಇವರಿಗೆ ಗೌರವ ಸನ್ಮಾನ ಮಾಡಲಾಗುವುದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 