ಜ್ಞಾನೇಶ್ವರ ಧರ್ಮಟ್ಟಿ ಅಧ್ಯಕ್ಷರಾಗಿ ಪದಗ್ರಹಣ
Gyaneshwar Dharmatti takes oath as President
ಲೋಕದರ್ಶನ ವರದಿ
ಹಾರೂಗೇರಿ 20: ಪಟ್ಟಣದ ಪುರಸಭೆ ಸಭಾಭವನದಲ್ಲಿ ಗುರುವಾರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜ್ಞಾನೇಶ್ವರ ಧರ್ಮಟ್ಟಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.
ಪದಗ್ರಹಣ ಮಾಡಿದ ಜ್ಞಾನೇಶ್ವರ ಧರ್ಮಟ್ಟಿ ಮಾತನಾಡಿ ಅವಿರೋಧವಾಗಿ ಆಯ್ಕೆ ಮಾಡಿದ ಮಾಜಿ ಶಾಸಕ ಪಿ.ರಾಜೀವ್, ಪಕ್ಷದ ಹಿರಿಯ ಮುಖಂಡರು ಮತ್ತು ಸದಸ್ಯರಿಗೆ ಧನವ್ಯಾದ ತಿಳಿಸಿದ ಅವರು ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದು, ಹಂತಹಂತವಾಗಿ ಪರಿಹಾರ ಕಲ್ಪಿಸಲಾಗುವುದು. ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು, ರಸ್ತೆ ಸುಧಾರಣೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದೆಂದು ಹೇಳಿದರು.
ಪುರಸಭೆ ಉಪಾಧ್ಯಕ್ಷ ಬಸವರಾಜ ಅರಕೇರಿ, ಮುಖ್ಯಾಧಿಕಾರಿ ಬಸವರಾಜ ಮನಗೂಳಿ, ಆರೋಗ್ಯಾಧಿಕಾರಿ ಮಲ್ಲಿಕಾರ್ಜುನ ಕುಚಬಾಳ, ಸದಸ್ಯರಾದ ಕಾಂತು ಬಾಡಗಿ, ಆನಂದಗೌಡ ಪಾಟೀಲ, ಬಾಬುರಾವ ನಡೋಣಿ, ಬಸವರಾಜ ಅರಳಿಕಟ್ಟಿ, ಸಂತೋಷ ಸಿಂಗಾಡಿ, ಶಿವಾನಂದ ದಳವಾಯಿ, ವಿನಾಯಕ ಮುಡಸಿ, ಅಶೋಕ ಅರಕೇರಿ, ಮಾಳಪ್ಪ ಹಾಡಕಾರ, ಬಸವರಾಜ ಖೋತ, ಬಸವರಾಜ ಚೌಗಲಾ, ಜೀನಸೇನ ಸದಲಗಿ, ಪರಗೌಡ ಉಮರಾಣಿ, ಬಾಳಪ್ಪ ಸನದಿ ಮೊದಲಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 