ಎಚ್. ಡಿ. ರೇವಣ್ಣ ಆಪ್ತನ ಮನೆ ಮೇಲೆ ಐಟಿ ದಾಳಿ: ವಿಚಾರಣೆಗೆ ಹಾಜರಾಗಲು ಸೂಚನೆ
ಹಾಸನ, ಫೆ. 12: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಆಪ್ತರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.ಎಚ್ ಡಿ ರೇವಣ್ಣ ಅವರ ಆಪ್ತ, ಜೆಡಿಎಸ್ ಕಾರ್ಯಕರ್ತ ಹಾಗೂ ಕ್ಲಾಸ್ ಒನ್ ಕಂಟ್ರಾಕ್ಟರ್ ಶಿವಕುಮಾರ್ ಮನೆ ಮೇಲೆ ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ದಾಳಿ ಮಾಡಿ, ಶೋಧ ನಡೆಸಿದೆ.
ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿನ ಶಿವಕುಮಾರ್ ಮನೆಯಲ್ಲಿ ನಿನ್ನೆ ಬೆಳಗ್ಗೆ 8 ಗಂಟೆಯಿಂದ ಮಧ್ಯರಾತ್ರಿಯವರೆಗೂ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿ, ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದ ಬೇಲೂರು ರಸ್ತೆಯಲ್ಲಿರುವಐಟಿ ಕಚೇರಿಗೆ ಇಂದು ಹಾಜರಾಗುವಂತೆ ಶಿವಕುಮಾರ್ಗೆ ಅಧಿಕಾರಿಗಳು ಸೂಚಿಸಿದ್ದಾರೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯೂ ರೇವಣ್ಣ ಅವರ ಆಪ್ತರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 