ಅಮೂಲ್ಯ ಕೈಗೆ ಮೈಕ್ ಹೇಗೆ ಬಂತು ?: ಸಚಿವ ಸಿ.ಸಿ.ಪಾಟೀಲ್ ಪ್ರಶ್ನೆ
ಗದಗ, ಫೆ.22 : ಪಾಕ್ತಿಸಾನ ಪರವಾಗಿ ಘೋಷಣೆ ಕೂಗಿರುವುದು ದುರದೃಷ್ಟಕರ. ಅದು ಕೂಡಾ ಫ್ರೀಡಂ ಪಾರ್ಕ್ನಂತಹ ಪವಿತ್ರ ಸ್ಥಳದಲ್ಲಿ ಕೂಗಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೂಲ್ಯಗೆ ಕಾರ್ಯಕ್ರಮ ಆಯೋಜಕರು ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ. ಆದರೆ ಅವಳ ಕೈಯಲ್ಲಿ ಮೈಕ್ ಹೇಗೆ ಬಂತು ? ಎಂದು ಪ್ರಶ್ನಿಸಿದರು.ಇತ್ತಿಚಿನ ದಿನಗಳಲ್ಲಿ ಕೆಲವು ದೇಶದ್ರೋಹ ಸಂಘಟನೆಗಳ ಜೊತೆಗೆ ಯುವ ಜನಾಂಗ ಕೈ ಜೊಡಿಸುತ್ತಿರುವುದು ವಿಷಾದನೀಯ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದೇಶದ್ರೂಹದ ಕಾನೂನು ಅಡಿಯಲ್ಲಿ ಅವಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ದೇಶ ಪ್ರೇಮದ ವಿಷಯದಲ್ಲಿ ಯಾವುದೇ ರಾಜೀ ಇಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಪದೇ ಪದೇ ಇಂತಹ ಪ್ರಕರಣಗಳು ನಡೆಯುವುದನ್ನು ನೋಡಿದರೆ, ಇಂತಹ ವರ್ಗ ಯಾವುದಾದರೂ ಆಮಿಷಕ್ಕೆ ಒಳಗಾಗಿ ಮಾಡುತ್ತಿರುವ ಅನುಮಾನ ಕಾಡುತ್ತಿದೆ. ಪೊಲೀಸರ ತನಿಖೆಯಿಂದ ಎಲ್ಲಾ ಗೊತ್ತಾಗಬೇಕಾಗಿದೆ ಎಂದು ಸಚಿವರು ಹೇಳಿದರು.ಮಹದಾಯಿ, ಕಳಸಾ ಬಂಡೂರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯೋಜನೆ ಕುರಿತು ಕೇಂದ್ರದ ನಾಯಕರಿಗೆ ಸಾಕಷ್ಟು ಮನವ ಮನವರಿಕೆ ಮಾಡಿಕೊಡಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ಗೋವಾ ಹಾಗೂ ಮಹಾರಾಷ್ಟ್ರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. 13.46 ಟಿಎಂಸಿ ನೀರು ಸದ್ಬಳಕೆಗೆ ಕ್ರಮ ಕೈಗೊಳುತ್ತೇವೆ ಎಂದರು.ಈ ಯೋಜನೆ ಜಾರಿಗೆ ಬಜೆಟ್ನಲ್ಲಿ ಸಂಪನ್ಮೂಲ ಮೀಸಲಿಡಲು ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ಮಾಡುತ್ತೇವೆ. ಈ ಬಜೆಟ್ ನಲ್ಲಿ ಯೋಜನೆ ಜಾರಿಗಾಗಿ ಕ್ರಮ ಕೈಗೊಳುತ್ತೇವೆ. ಕೇಂದ್ರಕ್ಕೆ ಒತ್ತಡ ಹೇರುವ ಅವಶ್ಯಕತೆ ಇಲ್ಲ. ಸ್ವಯಂಪ್ರೇರಿತವಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ಪಾಟೀಲ್ ಹೇಳಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 