ಭಯೋತ್ಪಾದನೆಗೆ ಹಣಕಾಸು ನೆರವು: ಪಾಕ್ ನ್ಯಾಯಾಲಯ ದಿಂದ ಹಫೀಜ್ ಸಯೀದ್ ವಿರುದ್ಧ ದೋಷಾರೋಪ
ಇಸ್ಲಾಮಾಬಾದ್, ಡಿ 11 : ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಆರೋಪದ ಮೇಲೆ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹಾಗೂ ಜಮಾತ್-ಉದ್-ದುವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಲಾಹೋರ್ನ ಭಯೋತ್ಪಾದಕ ನಿಗ್ರಹ ನ್ಯಾಯಾಲಯ ಬುಧವಾರ ದೋಷಾರೋಪ ಹೊರಿಸಿದೆ.
ಭಯೋತ್ಪಾದಕ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ಹರ್ಷದ್ ಭುಟ್ಟಾ ಅವರು ಹಫೀಜ್ ಸಯೀದ್ ಮತ್ತು ಇತರ ನಾಲ್ವರು ಜೆಯುಡಿ ನಾಯಕರ ವಿರುದ್ಧ ದೋಷಾರೋಪಣೆ ಹೊರಿಸಿದ್ದಾರೆ. ಭಯೋತ್ಪಾದಕರಿಗೆ ಹಣಕಾಸು ನೆರವು ಒದಗಿಸಿರುವುದಕ್ಕೆ ಸಂಬಂಧಿಸಿ ಕಳೆದ ಜುಲೈನಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಿಚಾರಣೆ ಬಳಿಕ ನ್ಯಾಯಾಧೀಶ ಭುಟ್ಟಾ ಅವರು ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದರು.
ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಆರೋಪದ ಮೇಲೆ ಜುಲೈ 17ರಂದು ಪಂಜಾಬ್ ಪೊಲೀಸ್ನ ಭಯೋತ್ಪಾದನೆ ನಿಗ್ರಹ ಇಲಾಖೆ(ಸಿಟಿಡಿ) ಹಫೀಜ್ ಸಯೀದ್ ಮತ್ತು ಆತನ ಸಹಚರರ ವಿರುದ್ಧ 23 ಎಫ್ಐಆರ್ಗಳನ್ನು ದಾಖಲಿಸಿ, ಸಯೀದ್ನನ್ನು ಬಂಧಿಸಿತ್ತು.
ಭಯೋತ್ಪಾದನೆಗೆ ಹಣಕಾಸು ನೆರವು ಕುರಿತು ಸಿಟಿಡಿ ದಾಖಲಿಸಿದ ಪ್ರಕರಣದಲ್ಲಿ ಒಬ್ಬ ಶಂಕಿತ ಲಭ್ಯವಿಲ್ಲದ ಕಾರಣ ಶನಿವಾರ ದೋಷಾರೋಪ ಹೊರಿಸುವುದಕ್ಕೆ ವಿಳಂಬವಾಗಿತ್ತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 