ಹಗರಿಬೊಮ್ಮನಹಳ್ಳಿ: ಐತಿಹಾಸಿಕ ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ಅಗತ್ಯ: ಹಾಲುಮತ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ
ಲೋಕದರ್ಶನವರದಿ
ಹಗರಿಬೊಮ್ಮನಹಳ್ಳಿ 08: ಗ್ರಾಮೀಣ ಕ್ರೀಡೆಗಳಲ್ಲಿ ಮಾನ್ಯತೆ ಪಡೆದ ಟಗರಿನ ಕಾಳಗವೂ ಐತಿಹಾಸಿಕ ಕ್ರೀಡೆಯಾಗಿದೆ ಈ ಐತಿಹಾಸಿಕ ಕ್ರೀಡೆಗೂ ಪ್ರೋತ್ಸಾಹ ಅಗತ್ಯವಾಗಿ ಬೇಕಿದೆ ಎಂದು ಹಾಲುಮತ ಸಮಾಜದ ತಾಲೂಕು ಅಧ್ಯಕ್ಷ ಬುಡ್ಡಿ ಬಸವರಾಜ ಹೇಳಿದರು.
ತಾಲೂಕಿನ ಉಪನಾಯಕನಹಳ್ಳಿ ಗ್ರಾಮದಲ್ಲಿ ಯುಗಾದಿ ಸಂವತ್ಸರ ಅಂಗವಾಗಿ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಪ್ರಯುಕ್ತ ಕುರಿಗಾಯಿ ಸಂಘದಿಂದ ಟಗರಿನ ಕಾಳಗ ಕ್ರೀಡೆಯನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಟಗರಿನ ಕಾಳಗಕ್ಕೆ ಅದರದೇ ಆದ ಮಹತ್ವವಿದೆ. ಇದು ಗ್ರಾಮೀಣ ಪ್ರದೇಶದ ಕುರಿಗಾಯಿ ಯುವಕರನ್ನು ಪ್ರೋತ್ಸಾಹಿಸುವ ಕಾಯಕ ಹಾಗೂ ಈ ಕ್ರೀಡೆ ಐತಿಹಾಸಿಕ ಗ್ರಾಮೀಣ ಕ್ರೀಡೆಯಾಗಿದೆ ಎಂದರು.
ಸಮಾಜದ ಹಿರಿಯ ಮುಖಂಡ ಮುಟುಗನಹಳ್ಳಿ ಕೊಟ್ರೇಶ್ ಟಗರಿನ ಪೂಜೆ ಮಾಡಿ ನಾವು ಸಾಕಿ ಸಲುಹಿದ ಟಗರಿನ ಕಾಳಗವನ್ನು ಹಮ್ಮಿಕೊಂಡು ಜಾತ್ರೆಯ ಸಮಾರಂಭದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿರುವುದಾಗಿ ಕುರಿ ಸಾಗಾಣಿಕೆಗೆ ಪ್ರೋತ್ಸಾಹ ಕೊಟ್ಟಂತಾಗಿದೆ ಎಂದರು.
ಈ ಸಂದರ್ಭದಲ್ಲಿ ವಿ.ಮಂಜುನಾಥ, ಬಿ.ಎಂ.ರಾಜು, ಬಿ.ಗೋಣೆಪ್ಪ, ಹೆಚ್.ಆಂಜನೇಯಪ್ಪ, ಉಮೇಶ್, ಡಿ.ಕೃಷ್ಣ, ಎ.ಷಣ್ಮುಖ, ಈರಪ್ಪ, ಡಿ.ಲೋಕೇಶ್ ಇತರರು ಭಾಗವಹಿಸಿದ್ದರು. ಕಾಳಗದಲ್ಲಿ ದಾವಣಗೆರೆ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಕೊಪ್ಪಳ, ಮುಂಡರಗಿ, ಹಡಗಲಿ ಭಾಗಗಳಿಂದ 80ಕ್ಕೂ ಹೆಚ್ಚು ಟಗರುಗಳು ಕಾಳಗದಲ್ಲಿ ಭಾಗವಹಿಸಿದ್ದವು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 