ಹಲಗೇರಿ: ವಿಶ್ವ ಪರಿಸರ ದಿನಾಚರಣೆ
ಲೋಕದರ್ಶನ ವರದಿ
ಸಿದ್ದಾಪುರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಅರಣ್ಯ ಇಲಾಖೆ,ಸರ್ಕಾರಿ ಪದವಿಪೂರ್ವ ಕಾಲೇಜು ಹಲಗೇರಿ, ಸಿದ್ದಾಪುರ, ಇವರ ಸಹಯೋಗದೊಂದಿಗೆ, ಗುರುವಾರ ಸರ್ಕಾರಿ ಪದವಿಪೂರ್ವ ಕಾಲೇಜು ಹಲಗೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶರು ಮತ್ತು ತಾ.ಕಾ.ಸೇ.ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಿದ್ದರಾಮ ಎಸ್. ಮಾತನಾಡಿ ಪರಿಸರವು ಮಾನವನ ಅತಿಯಾದ ಹಸ್ತಕ್ಷೇಪದಿಂದ ಮಲಿನವಾಗುತ್ತಿದೆ. ಪರಿಸರ ಸಂರಕ್ಷಣೆಯು ನಮ್ಮ ಮೂಲಭೂತ ಕರ್ತವ್ಯ ಕೂಡ ಆಗಿರುತ್ತದೆ. ಪ್ರಾಕೃತಿಕ ಸಮತೋಲನ ಕಾಪಾಡುವುದಕ್ಕೆ ಪರಿಸರ ಸಂರಕ್ಷಣೆಯೊಂದೆ ಪ್ರಮುಖ ಮಾರ್ಗವಾಗಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಚಂದ್ರಶೇಖರ ಹೆಚ್.ಎಸ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಡಿ. ನಾಯ್ಕ ,ವಲಯ ಅರಣ್ಯಾಧಿಕಾರಿ ವಾಯ್.ಕೆ,ಕಿರಣಕುಮಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಕೀಲರಾದ ಏ.ಆರ್.ನಾಯ್ಕ ಪರಿಸರ ಸಂರಕ್ಷಣೆಯ ಬಗ್ಗೆ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದಿನೇಶ ಕೆ. ವಹಿಸಿದ್ದರು. ವಿದ್ಯಾರ್ಥಿ ಕು. ಸಿಂಚನಾ ಪ್ರಾರ್ಥಿಸಿದರು . ಕು. ನೂತನ ಸ್ವಾಗತಿಸಿದರು, ಕು. ಹೇಮಂತ ನಿರೂಪಿಸಿದರು. ಕು. ಸಂಜಯ ವಂದಿಸಿದರು. ನಂತರ ಕಾಲೇಜಿನ ಮೈದಾನದಲ್ಲಿ ಗಿಡನೆಡಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 