ಕೈ ತೋಳೆಯುದು ಬಹಳ ಮುಖ್ಯ: ಮಲ್ಲೇಶ
Hand washing is very important: Mallesh
ಕೈ ತೋಳೆಯುದು ಬಹಳ ಮುಖ್ಯ: ಮಲ್ಲೇಶ
ಬ್ಯಾಡಗಿ 15: ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ನೀರು ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡಿಕೊಂಡರೆ ಆರೋಗ್ಯ ಸ್ಥಿರವಾಗಿಟ್ಟುಕೊಳ್ಳಲು ಸಾಧ್ಯ ಎಂದು ಮೋಟೆಬೆನ್ನೂರು ಗ್ರಾ ಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲೇಶ ಮೋಟೆನವರ ಅಭಿಪ್ರಾಯಪಟ್ಟರು. ತಾಲೂಕಿನ ಮೋಟೆಬೆನ್ನೂರು ಗ್ರಾಮ ಪಂಚಾಯತಿ ಆವರಣದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ಧ ವಿಶ್ವ ಕೈ ತೊಳೆಯುವ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಜೊತೆ ಕೈ ತೊಳೆಯುವ ಮೂಲಕ ಮಾತನಾಡಿದರು. ವಿಶ್ವ ಕೈತೊಳೆಯುವ ದಿನಾಚರಣೆಯಿಂದ ಅಂಗನವಾಡಿ ಹಾಗು ಶಾಲೆಗಳಲ್ಲಿ ಮಕ್ಕಳಿಗೆ ಅಗತ್ಯ ಜಾಗೃತಿ ಮೂಡಿಸುವ ಅಗತ್ಯವಿದೆ. ಚಿಕ್ಕಮಕ್ಕಳು ಆಟವಾಡಿ ಅದೇ ಕೈ ಗಳಿಂದ ಆಹಾರ ಸೇವನೆ ಮಾಡಲು ಮುಂದಾಗುವುದು ಸಹಜ. ಆದ್ದರಿಂದ ಶಾಲೆಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಕುರಿತು ಜಾಗೃತಿ ಮೂಡಿಸಿದಲ್ಲಿ ಶೇ.25ರಿಂದ 50ರಷ್ಟು ಮಕ್ಕಳಿಗೆ ಅನಾರೋಗ್ಯ ದೂರವಾಗಲಿದೆ ಎಂದರು.ಮಣ್ಣಲ್ಲಿ ಆಟವಾಡುವ ಮಕ್ಕಳು ಕೈ ತೊಳೆಯದೇ ಆಹಾರ ಸೇವನೆ ಮಾಡುವುದರಿಂದ ಅತಿಸಾರ, ವಾಂತಿ, ಭೇದಿ, ನ್ಯೂಮೋನಿಯಾ ರೋಗಗಳು ಹರಡುವ ಸಾಧ್ಯತೆಯಿರುತ್ತದೆ. ಕೈ ತೊಳೆಯುವುದು ಸಣ್ಣ ವಿಷಯವಾದರೂ ನಿರ್ಲಕ್ಷಿಸಿದಲ್ಲಿ ದೊಡ್ಡ ಅಪಾಯಗಳು ಎದುರಾಗಲಿವೆ. ಎಂದು ಅಂಗನವಾಡಿ ಶಿಕ್ಷಕಿ ಬಸಮ್ಮ ತಾಯತಂದಿ.ಹೇಳಿದರುಈ ವೇಳೆ ಗ್ರೇಡ 1 ಕಾರ್ಯದರ್ಶಿ ಕೃಷ್ಣಗೌಡ ಭಗವಂತ ಗೌಡ್ರು . ಕಾರ್ಯದರ್ಶಿ ನಾಗಪ್ಪ ಪೀಠದ. ಮಾದೇವಕ್ಕ ಕರ್ಕಣ್ಣನವರ್ ಪಂಚಾಯತಿಯ ಸಿಬ್ಬಂದಿಗಳು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 