ಕರಕುಶಲ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
Handicraft exhibition and awareness program launched
ಕೊಪ್ಪಳ 27: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ಅವರಣದಲ್ಲಿ ಎನ್ ಹೆಚ್ ಡಿಪಿ ಯೋಜನೆಯಡಿಯಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತರ ಕರಕುಶಲ ಸೇವಾ ಕೇಂದ್ರ ಮಂಗಳೂರು ವತಿಯಿಂದ ಆಯೋಜಿಸಲಾಗಿದ್ದ ಕರಕುಶಲ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ ಜರುಗಿತು.
ಮೂರು ದಿನಗಳ ಕಾಲ ಜರುಗಿದ ಸದರಿ ಕಾರ್ಯಕ್ರಮಕ್ಕೆ ಕಾಲೇಜಿನ ಉಪ ಪ್ರಾಚಾರ್ಯರಾದ ಎಂಎ ಖಾಯ್ಯುಮ್ ರವರು ಚಾಲನೆ ನೀಡಿದರು, ಜವಳಿ ಸಚಿವಾಲಯದ ಅಭಿವೃದ್ದಿ ಆಯುಕ್ತರ ಕರಕುಶಲ ಕಚೇರಿಯ ಮಾರುಕಟ್ಟೆ ಬೆಂಬಲ ಯೋಜನೆ ಅಡಿಯಲ್ಲಿ ಭಾರತೀಯ ಕರಕುಶಲ ವಸ್ತುಗಳನ್ನು ಉತ್ತೇಜಿಸಲು ರಾಜ್ಯದ ವಿವಿಧ ಕರಕುಶಲ ವಸ್ತುಗಳ ಬಗ್ಗೆ ಶಾಲಾ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಘಟಕರು ವಿವರಿಸಿದರು. ನೀವೇ ಮಾಡಿ ಆಧಾರದ ಮೇಲೆ ಇದು ವಿದ್ಯಾರ್ಥಿಗಳಿಗೆ ಭಾರತದ ಕರಕುಶಲ ವಸ್ತುಗಳ ತಿಳುವಳಿಕೆಯನ್ನು ಬೆಳೆಸಿಕೊಳ್ಳಲು ಮತ್ತು ಅರಿವು ಮೂಡಿಸಲು ಇದು ಸಹಾಯಮಾಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಕಿನಲ್ ಚಾಯ್ಸ್ ನ ಆನಂದ ಚಿತ್ರಗಾರ, ಟೆರಾಕೋಟ ಜೆವೆಳರಿಸ್ ನ ರೇಣುಕಾ ಕ್ರಾಸ್ ಲೀಫ್ ರೀಡ್ ನ ಸಹನ ಲಂಬಾಣಿ ಕಸೂತಿ ಯ ಲಕ್ಷ್ಮೀಬಾಯಿ ಭಾಗವಹಿಸಿದ್ದರು, ಇದರಲ್ಲಿ ಫಾದರ್ಸಾಬ್ ರಾಜೇಶ್ವರಿ ಕೆಎಂ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 