ಬಳ್ಳಾರಿ ರಾಮಕೃಷ್ಣ ಮಿಷನ್ ಕೇಂದ್ರದ ಆಶ್ರಯದ ವ್ಯಾಪ್ತಿಗೆ ದಾಖಲೆಗಳ ಹಸ್ತಾಂತರ
ಲೋಕದರ್ಶನ ವರದಿ
ಬಳ್ಳಾರಿ 21: ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ಕೊಲ್ಕತ್ತಾದ ಶ್ರೀ ರಾಮಕೃಷ್ಣ ಮಿಷನ್, ಬೇಲೂರು ಮಠಕ್ಕೆ ಸೋಮವಾರ ಸಂಜೆ ಹಸ್ತಾಂತರ ಮಾಡಲಾಯಿತು.
ಬಳ್ಳಾರಿಯ ಹಿರಿಯರಾಗಿರುವ ಮಾಜಿ ಸಚಿವರಾದ ಅಲ್ಲಂ ವೀರಭದ್ರ್ಪ, ರಾಜ್ಯ ಸಭಾದ ಮಾಜಿ ಸದಸ್ಯರಾಗಿರುವ ಕೆ.ಸಿ. ಕೊಂಡಯ್ಯ, ಶಾಸಕರಾದ ನಾರಾ ಭರತರೆಡ್ಡಿ, ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಮೇಯರ್ ಪಿ. ಗಾದೆಪ್ಪ, ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರದ ಅಧ್ಯಕ್ಷರಾದ ಶ್ರೀಧರ ಬೋನಗೇರಿ, ಉಪಾಧ್ಯಕ್ಷರಾದ ಪೃಥ್ವಿರಾಜ್ ಭೂಪಾಲ್ ಮತ್ತು ಸಿಎ. ಸಿ. ಎರ್ರಿಸ್ವಾಮಿ ಅವರು ಭಕ್ತಾದಿಗಳ ಸಮ್ಮುಖದಲ್ಲಿ ರಾಮಕೃಷ್ಣ ಮಿಷನ್, ಬೇಲೂರು ಮಠದ ಪ್ರಧಾನ ಸಹಾಯಕ ಕಾರ್ಯದರ್ಶಿಗಳಾದ ಸ್ವಾಮಿ ಸತ್ಯೇಶಾನಂದಜೀ ಮಹಾರಾಜ್, ಬೆಂಗಳೂರಿನ ರಾಮಕೃಷ್ಣ ಮಿಷನ್, ಶಿವನಹಳ್ಳಿಯ ಸ್ವಾಮಿ ಮಹಾವಾಕ್ಯಾನಂದಜೀ ಮಹಾರಾಜ್ ಮತ್ತು ಬಳ್ಳಾರಿಯ ನೂತನ ಉಸ್ತುವಾರಿಗಳಾಗಿರುವ ಸ್ವಾಮಿ ಮಂಗಲನಾಥಾನಂದಜೀ ಮಹಾರಾಜ್ ಅವರು ದಾಖಲೆಗಳನ್ನು ಹಸ್ತಾಂತರ ಮಾಡಿದರು. ನಂತರ ದಾಖಲೆಗಳನ್ನು ಸ್ವೀಕರಿಸಿದ ಸ್ವಾಮಿಗಳು ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ರಾಮಕೃಷ್ಣ ಮಿಷನ್ಗೆ ಸೇರೆ್ಡ ಮಾಡಿಕೊಳ್ಳಲಾಗಿದೆ ಎಂದು ಘೋಷಣೆ ಮಾಡಿದರು.
ಅಲ್ಲಂ ವೀರಭದ್ರ್ಪ, ಶ್ರೀ ಕೆ.ಸಿ. ಕೊಂಡಯ್ಯ, ನಾರಾ ಭರತರೆಡ್ಡಿ, ಜಿ. ಸೋಮಶೇಖರ್ ರೆಡ್ಡಿ ಇವರುಗಳು ಮಾತನಾಡಿದಾಗ ಬಳ್ಳಾರಿಯ ರಾಮಕೃಷ್ಣ ಮಿಷನ್ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು ಹಾಗೂ ಸರ್ವದ ತಮ್ಮ ಸಹಾಯ ಈ ಮಠಕ್ಕೆ ಇದ್ದೇ ಇರುತ್ತದೆ ಎಂದು ವ್ಯಕ್ತಪಡಿಸಿದರು.
ಶ್ರೀ ಶ್ರೀಧರ್ ಬೋನಗೇರಿಯವರು ಸಭೆಗೆ ಪ್ರಾಸ್ತವಿಕ ನುಡಿಯನ್ನು ನೀಡಿದರು, ಪೃಥ್ವೀರಾಜ್ ಭೂಪಾಲ್ರವರು ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರದಿಂದ ರಾಮಕೃಷ್ಣ ಮಿಷನ್ಗೆ ಸೇರೆ್ಡ ಆಗುವವರೆಗಿನ ಬೆಳವಣಿಗೆಗಳನ್ನು ಮತ್ತು ದಾನಿಗಳ ಕುರಿತು ವರದಿ ನೀಡಿದರು. ಸಿ ಎ. ಸಿ ಎರ್ರಿಸ್ವಾಮಿಯವರು ದಾನಿಗಳ ಕುರಿತು ಮಾಹಿತಿ ನೀಡಿದರು. ಕೇಂದ್ರದ ಕಾರ್ಯದರ್ಶಿಗಳಾದ ಜಗನ್ನಾಥರವರು ಸಭೆಗೆ ಸ್ವಾಗತ ಕೋರಿದರು, ಶಿಕ್ಷಕರಾದ ರಾಜಶೇಖರವರು ಕಾರ್ಯಕ್ರಮದ ನಿರುಪಣೆ ಮಾಡಿದರು. ಕಾರ್ಯಕಾರಿ ಸಮಿತಿ ಸದಸ್ಯ ಗಡಿಗೆ ರಾಕೇಶರವರು ವಂದನಾರೆ್ಣ ಸಲ್ಲಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 