ಹನುಮ ಜಯಂತಿ : ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
ನವದೆಹಲಿ, ಏ 08 ,ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಹನುಮ ಜಯಂತಿಯ ಸಂದರ್ಭದಲ್ಲಿ ಶುಭ ಕೋರಿದ್ದಾರೆ. “ದೇಶವಾಸಿಗಳಿಗೆ ಹನುಮ ಜಯಂತಿಯ ಶುಭಾಶಯಗಳು. ಪವನಪುತ್ರನ ಜೀವನ ಎಲ್ಲರಿಗೂ ಆದರ್ಶ. ಭಕ್ತಿ ಹಾಗೂ ಶಿಸ್ತನ್ನು ತನ್ನುಸಿರಿನಲ್ಲಿ ಅಳವಡಿಸಿಕೊಂಡಿದ್ದ ಧೀಮಂತ. ಬದುಕಿನಲ್ಲಿ ಎದುರಾಗುವ ಎಲ್ಲ ಸವಾಲುಗಳಿಂದ ಹೊರಬರಲು ಸ್ಫೂರ್ತಿ ನೀಡುತ್ತದೆ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. ರಾವಣನಂತಹ ರಕ್ಕಸರನ್ನು ಸಂಹರಿಸುವ ಶ್ರೀರಾಮನ ಕಾರ್ಯದಲ್ಲಿ ಕೈಜೋಡಿಸಿದ ಕೀರ್ತಿ ಹಾಗೂ ರಾವಣನ ಪುತ್ರ ಅಕ್ಷಕುಮಾರ ಸೇರಿದಂತೆ ಹಲವರು ರಕ್ಕಸರನ್ನು ಯಮಪುರಿಗೆ ಅಟ್ಟಿದ ಕೀರ್ತಿಹನುಮಂತನಿಗೆ ಸಲ್ಲುತ್ತದೆ.ಶ್ರೀರಾಮ, ರಾವಣರ ಯುದ್ಧದ ವೇಳೆ ಮೂರ್ಛಿತನಾಗಿದ್ದ ಲಕ್ಷ್ಮಣನನ್ನು ಉಪಚರಿಸಲು ಸಂಜೀವಿನಿ ಪರ್ವತವನ್ನೇ ಹೊತ್ತುತಂದಿದ್ದ ಹನುಮಂತನ ಗಾಥೆ ಜನಜನಿತ. ಭಾರತದಲ್ಲಿ ಹನುಮನ ದೇವಾಲಯಗಳಿಲ್ಲದ ಊರೇ ಇಲ್ಲ ಎನ್ನಬಹುದು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 