ನಿರಂತರ ಓದಿಗೆ ಕಠಿಣ ಪರಿಶ್ರಮ ಮುಖ್ಯ: ಮುರುಗೇಶ ಕಡ್ಲಿಮಟ್ಟಿ
Hard work is important for continuous learning: Murugesha Kadlimatti
ಮಹಾಲಿಂಗಪುರ 13: ಇಂದಿನ ಯುವ ಜನಾಂಗವು ನಿರಂತರ ಓದುವಿಕೆಗೆ ನಿತ್ಯ ಕಠಿಣ ಪರಿಶ್ರಮ ಪಡಲು ಮುಂದಾಗಬೇಕು.ಅದರ ಜೊತೆಗೆ ಮುಂದೆ ಬಹಳಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಹೇಳಿದರು.
ಸ್ಥಳಿಯ ಬನಶಂಕರಿ ದೇವಿ ಕಲ್ಯಾಣ ಮಂಟಪದಲ್ಲಿ ಸೌಜನ್ಯ ಕೈಮಗ್ಗ ನೇಕಾರರ ಸಹಕಾರಿ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ನೇಕಾರ ಮಕ್ಕಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿ “ಯುವಜನಾಂಗಕ್ಕೆ ಇಂದು ಅವಕಾಶಗಳು ಕಡಿಮೆಯಾಗುತ್ತಿವೆ.ಜನಸಂಖ್ಯೆ ಹೆಚ್ಚಳ ಹಾಗೂ ತಂತ್ರಜ್ಞಾನ ಹೆಚ್ಚು ಬೆಳವಣಿಗೆ ಕಾಣುತ್ತಿರುವ ಸಂದರ್ಭದಲ್ಲಿ ಓದಿಗೆ ಕಠಿಣ ಪರಿಶ್ರಮ ಹಾಕದಿದ್ದರೆ ಭವಿಷ್ಯದಲ್ಲಿ ಬೆಲೆ ಇಲ್ಲ ಎಂದರು.
40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾಜದ ಹಿರಿಯರಾದ ಮಲ್ಲಪ್ಪ ಭಾವಿಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ “ಇತ್ತಿಚಿನ ದಿನಗಳಲ್ಲಿ ನೇಕಾರರ “ಮಕ್ಕಳು ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ನಂತರ ಸಂಘದ ಅಧ್ಯಕ್ಷ ಜಿಎಸ್ ಗೊಂಬಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ ಮಾತನಾಡಿದರು.ಪುರಸಭೆ ಉಪಾಧ್ಯಕ್ಷ ಶೀಲಾ ಭಾವಿಕಟ್ಟಿ, ಬಿ ಡಿ ಸೋರಗಾಂವಿ, ಶಿವಾನಂದ ತಿಪ್ಪಾ,ಶಿದಗಿರಿಪ್ಪ ಕಾಗಿ, ಸೇರಿದಂತೆ ಅನೇಕ ಸಮಾಜದ ಹಿರಿಯರು ಉಪಸ್ಥಿತರಿದ್ದರು. ಬಸವರಾಜ ಮೇಟಿ ನಿರೂಪಿಸಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 