ಹರನಾಳ ಗ್ರಾಪಂ ಪಿಡಿಒ ಸಸ್ಪೆಂಡ್, ಒಂದೇ ದಿನ ಮೂರು ಜನ ಪಿಡಿಒ ಅಮಾನತು
Harnala Gram PDO suspended, three PDOs suspended in one day
ಹರನಾಳ ಗ್ರಾಪಂ ಪಿಡಿಒ ಸಸ್ಪೆಂಡ್, ಒಂದೇ ದಿನ ಮೂರು ಜನ ಪಿಡಿಒ ಅಮಾನತು
ದೇವರಹಿಪ್ಪರಗಿ 19 ಹರನಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸ್ಸಮ್ಮ ದೊಡಮನಿ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಿಸಿ ಆನಂದ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ವಿಜಯಪುರದಲ್ಲಿ ಮಂಗಳವಾರದಂದು ನಡೆದ ಸಭೆಗೆ ತಡವಾಗಿ ಆಗಮಿಸಿದ ಕೆರೂಟಗಿ ಮತ್ತು ಹಿಟ್ನಳ್ಳಿ ಹಾಗೂ ಕೊಂಡಗೂಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯತೆ ಗೆ ಸೇರಿದಂತೆ ತಾಲೂಕಿನಲ್ಲಿ ಒಂದೇ ದಿನ ಮೂರು ಜನ ಪಿಡಿಒ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪತ್ರಿಕೆಗೆ ತಾ.ಪಂ ಇಒ ಭಾರತಿ ಚೆಲುವಯ್ಯ ಮಾಹಿತಿ ನೀಡಿದರು.ಈ ಕುರಿತು ಬುಧವಾರದಂದು ಪತ್ರಿಕೆ ಜೊತೆ ಮಾತನಾಡಿದ ಅವರು, ಹರನಾಳ ಗ್ರಾಮ ಪಂಚಾಯತ್ ಪಿಡಿಒ ಬಸ್ಸಮ್ಮ ದೊಡ್ಡಮನಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹಾಗೂ ಹಿಟ್ನಳ್ಳಿ ಹಾಗೂ ಕೆರೂಟಗಿ ಗ್ರಾಪಂ ಪಿಡಿಒ ವಿನೋದ್ ರಾಠೋಡ ಹಾಗೂ ಕೊಂಡಗೂಳಿ ಗ್ರಾಮ ಪಂಚಾಯತ್ ಪಿಡಿಒ ಸಂಜೀವ ಶೇಗುಣಶಿ ಅವರ ಮೇಲೆ ಕರ್ತವ್ಯ ನಿರ್ಲಕ್ಷ್ಯತೆ ಆರೋಪದಿಂದ ವಿಜಯಪುರ ಜಿಲ್ಲೆಯ ಜಿಪಂ ಸಿಇಒ ರಿಸಿ ಆನಂದ ಅವರು ಮಂಗಳವಾರ ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಯಾರನ್ನು ನೇಮಿಸಿದ್ದಾರೆ ಎನ್ನುವುದು ನಾಳೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ತಾಲೂಕಿನಲ್ಲಿ ಸಂಚಲನ ಉಂಟಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 