ತಾಲೂಕಾ ಘಟಕದ ಅಧ್ಯಕ್ಷರಾಗಿ ಹಾರೂಗೇರಿ ಆಯ್ಕೆ
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾಗಿ ಉಪಖಜಾನೆಯ ಇಲಾಖೆ ನೌಕರ ವಿಶ್ವನಾಥ ಹಾರೂಗೇರಿ ಆಯ್ಕೆಯಾದರು.
ಶುಕ್ರವಾರದಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ 20 ಮತಗಳನ್ನು ಪಡೆದು ಬಹುಮತದಿಂದ ಆಯ್ಕೆಯಾದರು. ಇವರ ಪ್ರತಿಸ್ಪರ್ದೇಯಾಗಿ ಚುನಾವಣೆ ಕಣದಲ್ಲಿದ್ದ ಹಾಲಿ ಅಧ್ಯಕ್ಷ ಆಯ್.ಆರ್.ನದಾಫ ರವರು ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು. ವಿವಿಧ ಇಲಾಖೆಯಿಂದ ಆಯ್ಕೆಗೊಂಡಿದ್ದ 26 ಸದಸ್ಯರು ಮತಚಲಾಯಿಸಿದರು.
ನೀರಾವರಿ ಇಲಾಖೆ ಅಭಿಯಂತರ ನಿವಾಸ ಕಾಂಬಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಉಮೇಶ ಪೋಳ, ಎಸ್.ಎಸ್.ಪಾಟೀಲ, ಎಚ್.ಎಚ್.ನಾಗನ್ನವರ, ಶಿವಾನಂದ ಹುಲಬಾಳಿ, ಶಿವಪುತ್ರ ಹಾಡಕರ ಸೇರಿದಂತೆ ಅನೇಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 