ತಾಲೂಕಾ ಘಟಕದ ಅಧ್ಯಕ್ಷರಾಗಿ ಹಾರೂಗೇರಿ ಆಯ್ಕೆ
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾಗಿ ಉಪಖಜಾನೆಯ ಇಲಾಖೆ ನೌಕರ ವಿಶ್ವನಾಥ ಹಾರೂಗೇರಿ ಆಯ್ಕೆಯಾದರು.
ಶುಕ್ರವಾರದಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ 20 ಮತಗಳನ್ನು ಪಡೆದು ಬಹುಮತದಿಂದ ಆಯ್ಕೆಯಾದರು. ಇವರ ಪ್ರತಿಸ್ಪರ್ದೇಯಾಗಿ ಚುನಾವಣೆ ಕಣದಲ್ಲಿದ್ದ ಹಾಲಿ ಅಧ್ಯಕ್ಷ ಆಯ್.ಆರ್.ನದಾಫ ರವರು ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು. ವಿವಿಧ ಇಲಾಖೆಯಿಂದ ಆಯ್ಕೆಗೊಂಡಿದ್ದ 26 ಸದಸ್ಯರು ಮತಚಲಾಯಿಸಿದರು.
ನೀರಾವರಿ ಇಲಾಖೆ ಅಭಿಯಂತರ ನಿವಾಸ ಕಾಂಬಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಉಮೇಶ ಪೋಳ, ಎಸ್.ಎಸ್.ಪಾಟೀಲ, ಎಚ್.ಎಚ್.ನಾಗನ್ನವರ, ಶಿವಾನಂದ ಹುಲಬಾಳಿ, ಶಿವಪುತ್ರ ಹಾಡಕರ ಸೇರಿದಂತೆ ಅನೇಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 