ತಾಲೂಕಾ ಘಟಕದ ಅಧ್ಯಕ್ಷರಾಗಿ ಹಾರೂಗೇರಿ ಆಯ್ಕೆ
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾಗಿ ಉಪಖಜಾನೆಯ ಇಲಾಖೆ ನೌಕರ ವಿಶ್ವನಾಥ ಹಾರೂಗೇರಿ ಆಯ್ಕೆಯಾದರು.
ಶುಕ್ರವಾರದಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ 20 ಮತಗಳನ್ನು ಪಡೆದು ಬಹುಮತದಿಂದ ಆಯ್ಕೆಯಾದರು. ಇವರ ಪ್ರತಿಸ್ಪರ್ದೇಯಾಗಿ ಚುನಾವಣೆ ಕಣದಲ್ಲಿದ್ದ ಹಾಲಿ ಅಧ್ಯಕ್ಷ ಆಯ್.ಆರ್.ನದಾಫ ರವರು ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು. ವಿವಿಧ ಇಲಾಖೆಯಿಂದ ಆಯ್ಕೆಗೊಂಡಿದ್ದ 26 ಸದಸ್ಯರು ಮತಚಲಾಯಿಸಿದರು.
ನೀರಾವರಿ ಇಲಾಖೆ ಅಭಿಯಂತರ ನಿವಾಸ ಕಾಂಬಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಉಮೇಶ ಪೋಳ, ಎಸ್.ಎಸ್.ಪಾಟೀಲ, ಎಚ್.ಎಚ್.ನಾಗನ್ನವರ, ಶಿವಾನಂದ ಹುಲಬಾಳಿ, ಶಿವಪುತ್ರ ಹಾಡಕರ ಸೇರಿದಂತೆ ಅನೇಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 