ತಾಲೂಕಾ ಘಟಕದ ಅಧ್ಯಕ್ಷರಾಗಿ ಹಾರೂಗೇರಿ ಆಯ್ಕೆ
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾಗಿ ಉಪಖಜಾನೆಯ ಇಲಾಖೆ ನೌಕರ ವಿಶ್ವನಾಥ ಹಾರೂಗೇರಿ ಆಯ್ಕೆಯಾದರು.
ಶುಕ್ರವಾರದಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ 20 ಮತಗಳನ್ನು ಪಡೆದು ಬಹುಮತದಿಂದ ಆಯ್ಕೆಯಾದರು. ಇವರ ಪ್ರತಿಸ್ಪರ್ದೇಯಾಗಿ ಚುನಾವಣೆ ಕಣದಲ್ಲಿದ್ದ ಹಾಲಿ ಅಧ್ಯಕ್ಷ ಆಯ್.ಆರ್.ನದಾಫ ರವರು ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು. ವಿವಿಧ ಇಲಾಖೆಯಿಂದ ಆಯ್ಕೆಗೊಂಡಿದ್ದ 26 ಸದಸ್ಯರು ಮತಚಲಾಯಿಸಿದರು.
ನೀರಾವರಿ ಇಲಾಖೆ ಅಭಿಯಂತರ ನಿವಾಸ ಕಾಂಬಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಉಮೇಶ ಪೋಳ, ಎಸ್.ಎಸ್.ಪಾಟೀಲ, ಎಚ್.ಎಚ್.ನಾಗನ್ನವರ, ಶಿವಾನಂದ ಹುಲಬಾಳಿ, ಶಿವಪುತ್ರ ಹಾಡಕರ ಸೇರಿದಂತೆ ಅನೇಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 