ಬನ್ನಿಹಟ್ಟಿ ಗ್ರಾಮಕ್ಕೆ ಹಾವೇರಿ- ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲುಗಡೆ
Haveri-Kukke Subrahmanya bus stop for Bannihatti village
ಬ್ಯಾಡಗಿ 08: ತಾಲೂಕಿನ ಬನ್ನಿಹಟ್ಟಿ ಗ್ರಾಮದಲ್ಲಿ ಹಾವೇರಿ- ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲುಗಡೆ ಮಾಡಿರುವುದು ಸಂತಸ ತಂದಿದೆ ಎಂದು ಸಮಾಜ ಸೇವಕ ಮಾಲತೇಶ ಪೂಜಾರ ಹೇಳಿದರು.ಅವರು ಬನ್ನಿಹಟ್ಟಿ ಗ್ರಾಮಕ್ಕೆ ಹಾವೇರಿ- ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲುಗಡೆ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಹಾಗೂ ಮನವಿಯನ್ನು ನೀಡಿ ಡಿಪೋ ಮ್ಯಾನೇಜರ ಅವರಿಗೆ ಒತ್ತಾಯಿಸಲಾಗಿತ್ತು, ಗ್ರಾಮದಿಂದ ದಿನನಿತ್ಯ ಹಲವಾರು ಭಕ್ತರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಸೇವೆಗೆ ತೆರಳುತ್ತಿದ್ದರು.
ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ನಿಲುಗಡೆ ಮಾಡಿದ್ದು, ಭಕ್ತರಿಗೆ ತೆರಳಲು ಅನುಕೂಲವಾಗುವಂತೆ ಮಾಡಿದ್ದಕ್ಕಾಗಿ ಡಿಪೋ ಮ್ಯಾನೇಜರ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಬನ್ನಿಹಟ್ಟಿ ಗ್ರಾಮದಲ್ಲಿ ಹಾವೇರಿ- ಕುಕ್ಕೆ ಸುಬ್ರಹ್ಮಣ್ಯ ಬಸ್ ಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.
ಗ್ರಾಮಸ್ಥರಾದಜಗದೀಶ ಕೆರಕರ, ಚೆನ್ನಬಸಪ್ಪ ಬೂದಿಹಾಳ, ಬಸವರಾಜ ಪೂಜಾರ, ಬಸನಗೌಡ ಮರಿಗೌಡ್ರ, ಪರಮೇಶಪ್ಪ ಕುರುವತ್ತಿ, ಶಂಕ್ರ್ಪ ಆನವಟ್ಟಿ, ಪರಶುರಾಮ ಪೂಜಾರ, ಚನ್ನಬಸಪ್ಪ ಕೋಣನವರ, ಪರಡೆಪ್ಪ ಹೊಸೂರ, ಬಸವರಾಜ ಚಿಕ್ಕಣಜಿ, ನಾಗಪ್ಪ ಚನ್ನಳ್ಳಿ ಕರಬಸಪ್ಪ ಕೋಣನವರ, ಮಹಾಂತೇಶ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 