ಹಾವೇರಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಪಠ್ಯಪುಸ್ತಕ ಬಗೆಹರೆಯದ ಗೊಂದಲ: ವಿಳಂಬ ನೀತಿ ಖಂಡಿಸಿ, ಶೀಘ್ರ ಪಠ್ಯಪುಸ್ತಕ ವಿತರಣೆಗೆ ಮನವಿ
Haveri University students' textbook dispute: Condemn delay, appeal for early textbook distribution
ರಾಣೆಬೆನ್ನೂರು 13 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎದುರು ಹಾವೇರಿ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಸೆಮಿಸ್ಟರ್ ಪಠ್ಯಪುಸ್ತಕ ವಿಳಂಬ ನೀತಿಯನ್ನು ಖಂಡಿಸಿ, ಕೂಡಲೇ ಪಠ್ಯಪುಸ್ತಕ ವಿತರಣೆಗಾಗಿ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಣೇಬೆನ್ನೂರು ತಾಲ್ಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರಾದ ಡಾ. ರವಿಕುಮಾರ್ ನಾಯ್ಕ ಅವರ ಮೂಲಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಹಾವೇರಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಹಲವು ಕಾಲೇಜುಗಳಿಗೆ ಬಿಎ, ಬಿಎಸ್ಸಿ, ಬಿಸಿಎ, ಬಿಬಿಎ ಪದವಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಬೋಧನಾ ತರಗತಿಗಳಿಗೂ ಪ್ರಾರಂಭವಾಗಿ ಒಂದು ತಿಂಗಳಾಗಿದೆ ಇಷ್ಟಾದರೂ ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದ ಪಠ್ಯಕ್ರಮವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು.ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡ ಅರುಣ್ ನಾಗವತ್ ಮಾತನಾಡಿ, ಪಠ್ಯಕ್ರಮ ವಿಳಂಬ ದಿಂದಾಗಿ ಉಪನ್ಯಾಸಕರ ಸಾಮಾನ್ಯ ವಿಷಯಗಳ ಬಗ್ಗೆ ಮಾತ್ರ ಬೋಧನೆ ಮಾಡುತ್ತಿದ್ದಾರೆ. ವಾರ್ಷಿಕ ವೇಳಾಪಟ್ಟಿಯ ಪ್ರಕಾರ ಇನ್ನೊಂದು ವಾರದ ನಂತರ ಕಿರುಪರೀಕ್ಷೆ ಪ್ರಾರಂಭವಾಗುತ್ತಿದೆ.
ಪಠ್ಯಕ್ರಮ ನೀಡಿದ ಜೊತೆಗೆ ಪಿಡಿಎಫ್ ಮಾದರಿಯಲ್ಲೂ ಪಠ್ಯಕ್ರಮ ಒದಗಿಸಿಲ್ಲ ಎಂದು ದೂರಿದರು. ಪ್ರತಿಬಾರಿಯೂ ಯಾವುದಾದರೂ ಒಂದು ಗೊಂದಲದಲ್ಲಿ ವಿದ್ಯಾರ್ಥಿಗಳನ್ನು ತಳ್ಳುವ ವ್ಯವಸ್ಥೆ ರೂಡಿಗತವಾಗಿ ಬರುತ್ತಿದೆ. ಈ ವ್ಯವಸ್ಥೆ ನಿಲ್ಲಬೇಕು ಇದರಿಂದ ಅಭ್ಯಾಸಕ್ಕೆ ಬಾರಿ ಹೊಡೆತ ಬೀಳುತ್ತದೆ. ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲ ಸಚಿವರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಅಧಿಕೃತ ಪಠ್ಯಕ್ರಮ ಬಿಡುಗಡೆ ಮಾಡಿ ಪಠ್ಯಪುಸ್ತಕ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಚ್ಚರಿಕೆ ನೀಡಿದರು.
ಪ್ರತಿಬಾರಿ ಪದವಿ ವಿದ್ಯಾರ್ಥಿಗಳಿಗೆ ಬಾರಿ ಅನ್ಯಾಯವಾಗುತ್ತಿದೆ. ಹೀಗೆ ಹಿಂದೆ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬದಿಂದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಗಳಲ್ಲಿ, ಪಠ್ಯಕ್ರಮ ಸಂಪೂರ್ಣ ವ್ಯವಸ್ಥಿತವಾಗಿ ನಡೆಯಲಿಲ್ಲ, ಈಗ ಪಠ್ಯಕ್ರಮ, ಪಠ್ಯಪುಸ್ತಕ ಮುದ್ರಣವಾಗದೆ ಕನ್ನಡ ಭಾಷೆಯ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ. ಹೀಗೆ ನಿರಂತರ ಮುಂದುವರಿದರೆ ಸೆಮಿಸ್ಟರ್ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗುತ್ತದೆ ಎಂದು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಮತಾ ನಾಯ್ಕ್, ಪ್ರಿಯದರ್ಶಿನಿ ಕ್ಯಾತನ, ರೂಪ ಜೆ, ಗಾಯಿತ್ರಿ ನಗವತ್, ಚೈತ್ರ ಕಚ್ಚರಗಟ್ಟಿ, ರಮೇಶ ಲಮಾಣಿ, ವಿನಾಯಕ್ ಕೆ, ಪವನ್ ಜಾಡರ್, ಚೇತನ್ ಉಲ್ಲರ್, ಭರತ್ ಎನ್ ಎಲ್, ಸಾನಿಯಾ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 