ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ನೇರ ಫೋನ್-ಇನ್ ಕಾರ್ಯಕ್ರಮ
Head and Neck Cancer Direct Phone-in Program
ಬೆಳಗಾವಿ 26: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ, ನೂತನ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ ದಿನಾಂಕ 26ನೆ ಜುಲೈ 2025 ರಂದು ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆಯ ಹಿರಿಯ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ ಡಾ. ರಾಜೇಂದ್ರ ಮೇಟಗುಡ್ಡಮಠ ಅವರು ಭಾಗವಹಿಸಿ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಎಂದರೇನು, ಕಾರಣಗಳು, ಮುಖ್ಯ ಲಕ್ಷಣಗಳು, ವಿಧಗಳು, ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚುವುದು ಹೇಗೆ, ಈ ಕ್ಯಾನ್ಸರ್ದಿಂದ ಚೇತರಿಸಿಕೊಂಡವರಿಗೆ ದೀರ್ಘಕಾಲಿನ ಆರೈಕೆ ಹೇಗಿರಬೇಕು ಮತ್ತು ಕೆಎಲ್ಇ ಸಂಸ್ಥೆಯ ನೂತನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸೆ ಹಾಗೂ ಸೇವಾ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ಗೆ ಸಂಭಂದಿಸಿದ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 