ಟಾಟಾ ಏಸಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ
Head-on collision between Tata AC and bike
ಹಾನಗಲ್ 06 : ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಶಾಸಕ ಶ್ರೀನಿವಾಸ ಮಾನೆ ಉಪಚರಿಸಿ, ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದರು.
ತಾಲೂಕಿನ ಅಕ್ಕಿಆಲೂರಿನ ಕಲ್ಲಾಪುರ ಕ್ರಾಸ್ ಬಳಿ ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಟಾಟಾ ಏಸಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪದ್ಮರಾಜ್ ಹಾವೇರಿ (25), ಅರುಣ ಹಾವೇರಿ (23) ಮತ್ತು ಮಹೇಶ ಭಜಂತ್ರಿ (35) ಎಂಬುವರು ಗಾಯಗೊಂಡಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಸಕ ಮಾನೆ ಗಾಯಾಳುಗಳನ್ನು ಸಂತೈಸಿ ಕೂಡಲೇ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಸೂಕ್ತ ಚಿಕಿತ್ಸೆಗೂ ವ್ಯವಸ್ಥೆ ಮಾಡಿದರು. ರಸ್ತೆ ಅಪಘಾತದ ಕಾರಣ ಕೆಲಕಾಲ ವಾಹನ ದಟ್ಟಣೆ ಹೆಚ್ಚಾಗಿತ್ತು. ತಮ್ಮ ಗನ್ಮ್ಯಾನ್ ಹಾಗೂ ಸ್ಥಳೀಯ ಮುಖಂಡರ ಮೂಲಕ ವಾತಾವರಣ ತಿಳಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಗಮನ ಸೆಳೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 