ಸೋಂಕಿತ ವ್ಯಕ್ತಿಗೆ ಚಕಿತ್ಸೆ ನಿರಾಕರಣೆ; 9 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಶೋಕಾಸ್ ನೋಟಿಸ್
ಬೆಂಗಳೂರು, ಜು 1: ಕೊರೋನಾ ಸೋಂಕಿತ ವ್ಯಕ್ತಿಯೋರ್ವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸಿದ 9 ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. 52 ವರ್ಷದ ಭಾವರ್ಲಾಲ್ ಸುಜನಿ ಎಂಬ ರೋಗಿಯೊಬ್ಬರು ಚಿಕಿತ್ಸೆಗಾಗಿ 18 ಆಸ್ಪತ್ರೆಗಳಿಗೆ ಅಲೆದಾಡಿದ್ದರೂ, ಯಾವೊಂದು ಆಸ್ಪತ್ರೆಯಲ್ಲೂ ಚಿಕಿತ್ಸೆ ದೊರಕದೆ ಮೃತಪಟ್ಟಿದ್ದಾರೆ. ಅವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ಪುತ್ರ ವಿಕ್ರಮ್ ಜೈನ್ ಮತ್ತು ಸಂಬಂಧಿ ದಿನೇಶ್ ಅವರನ್ನು ಜೂ. 30ರಂದು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವುದೇ ಆಸ್ಪತ್ರೆಗಳು ಹಾಸಿಗೆ, ವೆಂಟಿಲೆಟರ್ಗಳು ಲಭ್ಯವಿಲ್ಲ ಎಂದು ಕಾರಣ ನೀಡಿ ದಾಖಲು ಮಾಡಿಕೊಂಡಿರಲಿಲ್ಲ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 