ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women and Empowered Families Campaign
ಧಾರವಾಡ .18: ಧಾರವಾಡ ನಗರದ ವಾರ್ಡ್ ನಂ. 8 ಆರೋಗ್ಯ ಕೇಂದ್ರದಲ್ಲಿ ನಿನ್ನೆ (ಸೆ.17) ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಮಹಾನಗರ ಪಾಲಿಕೆ ಸದಸ್ಯ ಶಂಕರ ಶೇಳಕೆ ಅವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಒಂದೇ ಸೂರಿನಡಿಯಲ್ಲಿ ಗರ್ಭಿಣಿ ತಪಾಸಣೆ, ಬಾಣಂತಿ ತಪಾಸಣೆ, ಲಸಿಕಾ ಕಾರ್ಯಕ್ರಮ, ಎನ್ಸಿಡಿ ಕಾರ್ಯಕ್ರಮ, ಕಿಶೋರಿಯರಿಗೆ ಋತುಚಕ್ರದ ಶುಚಿತ್ವದ ಬಗ್ಗೆ, ಪೌಷ್ಟಿಕ ಆಹಾರದ ಬಗ್ಗೆ, ತಿಳಿಸಲಾಯಿತು.
ಕಿವಿ, ಕಣ್ಣು, ಗಂಟಲು, ಮೂಗು ತಪಾಸಣೆ, ರಕ್ತಹೀನತೆ ಪರೀಕ್ಷೆ, ಕ್ಯಾನ್ಸರ್ ಪರೀಕ್ಷೆ, ಕ್ಷಯರೋಗ ಪರೀಕ್ಷೆ, ಟೆಲಿ ಮಾನಸ ಸೌಲಭ್ಯಗಳು, ಸಿಕಲ್ ಸೆಲ್ ರಕ್ತಹೀನತೆ, ತಾಯಿ ಕಾರ್ಡ್ ವಿತರಣೆ, ಪೌಷ್ಟಿಕ ಆಹಾರ ಶಿಬಿರ, ಅಂಗದಾನ ಮತ್ತು ರಕ್ತದಾನದ ಬಗ್ಗೆ ವಿಶೇಷ ಮಾಹಿತಿ ನೀಡಲಾಯಿತು.ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ಸರ್ಕಾರದಿಂದ ಉಚಿತವಾಗಿ ತಲುಪಿಸಿಲಾಗುತ್ತಿದ್ದು, ಅದರ ಸದುಪಯೋಗವನ್ನು ಪಡೆಯುವಂತೆ ಜನರಿಗೆ ತಿಳಿಸಲಾಯಿತು.
ವೈದ್ಯಾಧಿಕಾರಿ ಡಾ.ಅರಣಾ ಅನ್ವೇಕರ ಅವರು ಅಭಿಯಾನದ ಕುರಿತು ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಸುರಿಕ್ಷಾಧಿಕಾರಿ ಚಂದ್ರಿಕಾ ದಮ್ಮಳ್ಳಿ ಅವರು ನಿರೂಪಿಸಿದರು.ಈ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 